ದತ್ತ ಜಯಂತಿ: ಸಿ.ಟಿ.ರವಿ ನೇತೃತ್ವದಲ್ಲಿ ಮಾಲಾಧಾರಿಗಳಿಂದ ಮನೆ ಮನೆಗೆ ತೆರಳಿ ಭಿಕ್ಷಾಟನೆ
ಚಿಕ್ಕಮಗಳೂರು, ಡಿ.7: ದತ್ತಜಯಂತಿಯ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಮಾಲಾಧಾರಿಗಳು ಬುಧವಾರ ಬೆಳಗ್ಗೆ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಕ್ಷಾಟನೆ ನಡೆಸಿ ಪಡಿ ಸಂಗ್ರಹ ಮಾಡಿದರು.
ಈ ವೇಳೆ ಇಲ್ಲಿನ ನಿವಾಸಿಗಳು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವೀಳ್ಯದೆಲೆ ಅಡಿಕೆ -ಬೆಲ್ಲ ನೀಡಿದರು.
ಗುರುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಾಗುತ್ತದೆ. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ನಗರದಲ್ಲಿ ಸಾವಿರಾರು ಮಂದಿ ಸೇರಿ ಶೋಭಾಯಾತ್ರೆ ನಡೆಸಲಿದ್ದಾರೆ.
ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿರುವ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.
Next Story