ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಡಿ.13: ಚಿತ್ರದುರ್ಗದ ಮುರುಘಾ ಮಠಕ್ಕೆ ಕೊನೆಗೂ ಆಡಳಿತಾಧಿಕಾರಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಇಂದು(ಡಿಸೆಂಬರ್ 13) ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.
ಮಠದ ಟ್ರಸ್ಟಿಯೂ ಆಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಿ.ಎಸ್.ವಸ್ತ್ರದ್ ಅವರನ್ನು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Next Story