ಪ್ರಧಾನಿ ಮೋದಿ ಭೇಟಿ ಮಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು, ಡಿ.14: ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಸಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಕರಾವಳಿ ಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು, ಮೀನುಗಾರರ ಕಲ್ಯಾಣ ಸಂಬಂಧಿತ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ಹೊಸದಿಲ್ಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೊಂದಿಗೆ ಖುದ್ದು ಭೇಟಿಯಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಪ್ರಧಾನಿ ಮೋದಿಯವರಿಗೆ ‘ಮತ್ಸ್ಯ ದೇವತೆ ಸ್ಮರಣಿಕೆ’ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ತಮ್ಮ ಇಲಾಖೆಯ ವಿವಿಧ ಯೋಜನೆಗಳು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಪ್ರಧಾನಿಯವರಿಗೆ ವಿವರಿಸಲಾಯಿತು ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story