Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನು ಎಚ್...

ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನು ಎಚ್ ಡಿಕೆಗೆ ನೀಡಿ 'ನೀವೇ ಸಿಎಂ ಆಗಬೇಕು ಅಂಕಲ್' ಎಂದ ವಿದ್ಯಾರ್ಥಿನಿಯರು

27 Dec 2022 2:39 PM IST
share
ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನು ಎಚ್ ಡಿಕೆಗೆ ನೀಡಿ ನೀವೇ ಸಿಎಂ ಆಗಬೇಕು ಅಂಕಲ್ ಎಂದ ವಿದ್ಯಾರ್ಥಿನಿಯರು

ನಾಗಮಂಗಲ, ಡಿ.27: ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ಜೆಡಿಎಸ್ 'ಪಂಚ ರತ್ನ ರಥ ಯಾತ್ರೆ' ವೇಳೆ  ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಮೂವರು ವಿದ್ಯಾರ್ಥಿನಿಯರು ತಾವು ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನು ದೇಣಿಗೆಯಾಗಿ ನೀಡಿ 'ನೀವೇ ಸಿಎಂ ಆಗಬೇಕು ಅಂಕಲ್' ಎಂದು ಶುಭ ಹಾರೈಸಿದ್ದಾರೆ. 

ಸೋಮವಾರ ನಾಗಮಂಗಲ ವಿಧಾನಸಭೆ  ಪಂಚ ರತ್ನ ರಥ ಯಾತ್ರೆ ಭಾಗವಾಗಿ ನಡೆದ ಸಮಾವೇಶದಲ್ಲಿ  ಮೂವರು ವಿದ್ಯಾರ್ಥಿನಿಯರು ದೇಣಿಗೆಯನ್ನು ಹಸ್ತಾಂತರಿಸಿದ್ದಾರೆ. ಜೊತೆಗೆ  ಪಂಚರತ್ನ ಯೋಜನೆಯಡಿ ನಮ್ಮ ಊರಿನಲ್ಲೂ ಹೈಟೆಕ್ ಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಮಾಡಿಸಿಕೊಡುವಂತೆ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ,  'ಪಂಚರತ್ನ ರಥಯಾತ್ರೆ ನನಗೆ ಅನೇಕ ಮಾನವೀಯ ಮುಖಗಳನ್ನು ಪರಿಚಯಿಸುತ್ತಿದೆ. ನಾಗಮಂಗಲದಲ್ಲಿ ರಥಯಾತ್ರೆ ನಿಮಿತ್ತ ನಡೆದ ಬೃಹತ್ ಸಮಾವೇಶದಲ್ಲಿ ನನ್ನನ್ನು ಹುಡುಕಿಕೊಂಡು ಬಂದ ಈ ಮೂವರು ಹೆಣ್ಣುಮಕ್ಕಳ ಮಮತೆ, ಕಾರುಣ್ಯವನ್ನು ಕಂಡು ನನ್ನ ಹೃದಯ ಉಕ್ಕಿಬಂದಿದೆ' ಎಂದು ಹೇಳಿದ್ದಾರೆ. 

'ಮೋನಿಶಾ, ಪಾವನಿ, ಶೋಭಾ ಎಂಬ ಮಕ್ಕಳು, ತಾವು ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನು ನನಗೆ ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ ಮಾತುಗಳು ಶಿಕ್ಷಣದ ಕುರಿತ ನನ್ನ ದೃಷ್ಟಿಕೋನಕ್ಕೆ ಮತ್ತಷ್ಟು ಸ್ಪಷ್ಟತೆ ನೀಡಿತು. ಈ ಮಾತುಗಳನ್ನು ನಾನು ಶುದ್ಧ ಅಂತಃಕರಣದಿಂದ ಕೇಳಿಸಿಕೊಂಡಿದ್ದೇನೆ. ಅವರ ಬೇಡಿಕೆಯನ್ನು ತಪ್ಪದೇ ಈಡೇರಿಸುತ್ತೇನೆ.' ಎಂದು ಬರೆದುಕೊಂಡಿದ್ದಾರೆ. 

ಪಂಚರತ್ನ ರಥಯಾತ್ರೆ ನನಗೆ ಅನೇಕ ಮಾನವೀಯ ಮುಖಗಳನ್ನು ಪರಿಚಯಿಸುತ್ತಿದೆ. ನಾಗಮಂಗಲದಲ್ಲಿ ರಥಯಾತ್ರೆ ನಿಮಿತ್ತ ನಡೆದ ಬೃಹತ್ ಸಮಾವೇಶದಲ್ಲಿ ನನ್ನನ್ನು ಹುಡುಕಿಕೊಂಡು ಬಂದ ಈ ಮೂವರು ಹೆಣ್ಣುಮಕ್ಕಳ ಮಮತೆ, ಕಾರುಣ್ಯವನ್ನು ಕಂಡು ನನ್ನ ಹೃದಯ ಉಕ್ಕಿಬಂದಿದೆ.1/2#ಪಂಚರತ್ನ_ರಥಯಾತ್ರೆ #ನಾಗಮಂಗಲ #ಮಂಡ್ಯ pic.twitter.com/VTTrUQQyrd

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 26, 2022
share
Next Story
X