ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸ
ಬೆಂಗಳೂರು, ಜ.9: ರಾಜ್ಯದಲ್ಲಿ ವಿಧಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಸ್ಥಾಪನೆ ಸಂಬಂಧ ನಾಳೆ (ಜ.10ರಂದು) ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ರಾಜ್ಯಕ್ಕೆ ಮೂರು ದಿನಗಳ ಭೇಟಿ ನೀಡಲಿದ್ದಾರೆ.
ಅಹ್ಮದಬಾದ್ ನಗರಕ್ಕೆ ಭೇಟಿ ನೀಡಲಿರುವ ಅವರು, ಅಲ್ಲಿನ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ತಮ್ಮ ಮೂರು ದಿನಗಳ ಭೇಟಿಯಲ್ಲಿ, ಸಚಿವರು, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು, ಎಂಓಯುಗೆ, ಸಹಿ ಹಾಕುವ ಸಾಧ್ಯತೆ ಇದೆ. ಅದೇ ರಈತಿ, ಇಡೀ ದಕ್ಷಿಣ ಭಾರತದ ಲ್ಲಿಯೇ ಪ್ರಥಮ ವೆನ್ನಾಲದ, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ, ಕರ್ನಾಟಕದಲ್ಲಿ ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.
ಇದೇ ವೇಳೆ ಗುಜರಾತ್ನ, ಮುಖ್ಯಮಂತ್ರಿ ಭೂಪೆಂದ್ರ ಭಾಯ್ ಪಾಟೀಲ್ ಅವರನ್ನು ಸೌಜನ್ಯ ಭೇಟಿ ಮಾಡಲಿದ್ದಾರೆ.
Next Story