Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮಾಂಸ ನೇತು ಹಾಕುವುದು ನಿಲ್ಲಲಿ':...

'ಮಾಂಸ ನೇತು ಹಾಕುವುದು ನಿಲ್ಲಲಿ': ಮಠಾಧೀಶರ ಸಲಹೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

10 Jan 2023 4:57 PM IST
share
ಮಾಂಸ ನೇತು ಹಾಕುವುದು ನಿಲ್ಲಲಿ: ಮಠಾಧೀಶರ ಸಲಹೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಬೆಂಗಳೂರು, ಜ.10: ಇತ್ತೀಚೆಗೆ ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ನೀಡಿದ ‘ಮಾಂಸಾಹಾರ ಆರೋಗ್ಯಕ್ಕೆ ಕೆಟ್ಟದು’ ಎಂಬ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. 

ಇದೀಗ ನಿನ್ನೆ  (ಸೋಮವಾರ) ವಿಧಾನಸೌಧದಲ್ಲಿ ಶಾಲಾ ಹಂತದಲ್ಲಿ ‘ಮೌಲ್ಯ ಶಿಕ್ಷಣ’ ಅಳವಡಿಸುವ ನಿಟ್ಟಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಠಾಧೀಶರು ನೀಡಿರುವ ಮಾಂಸಾಹಾರದ ಕುರಿತಾದ ಸಲಹೆ ರಾಜ್ಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. 

'ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಮಾಂಸ ನೇತು ಹಾಕುವುದು ನಿಲ್ಲಲಿ, ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕಾಗಿದೆ' ಎಂಬ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಸಲಹೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. 

ಪೇಜಾವರ ಮಠದ ಸ್ವಾಮೀಜಿ ಹೇಳಿದ್ದೇನು?: 'ಮಾಂಸ ನೇತು ಹಾಕುವುದು ನಿಲ್ಲಲಿ, ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕಾಗಿದೆ. ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಮಾಂಸವನ್ನು ಅಂಗಡಿಗಳ ಮುಂದೆ ನೇತುಹಾಕುವುದನ್ನು ಸ್ಥಗಿತಗೊಳಿಸಬೇಕು ಅಥವಾ ಇದನ್ನು ಮರೆಮಾಚಬೇಕು' ಎಂದು ಸಲಹೆ ನೀಡಿದ್ದರು. 

ಅಲ್ಲದೇ, ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, ''ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು'' ಎಂದು ಸಲಹೆ ನೀಡಿದ್ದರು. 

► ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ: 

ಈ ವಿಚಾರವಾಗಿ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಅವರು, ' ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ?' ಎಂದು ಪ್ರಶ್ನೆ ಮಾಡಿದ್ದಾರೆ. 

'ಉಡುಪಿ ಮಠದಲ್ಲಿ ಬ್ರಾಹ್ಮಣರ ಪಂಕ್ತಿಯಲ್ಲಿ ಕುಳಿತಿದ್ದ ಬಂಟ ಮಹಿಳೆಯನ್ನು ಊಟದಿಂದ ಎಬ್ಬಿಸಿ ಅವಮಾನಿಸಿ ಹೊರದಬ್ಬಲಾಯಿತು. ಈ ರೀತಿ ಮಹಿಳೆಯನ್ನು ಊಟದಿಂದ ಎಬ್ಬಿಸಿದ ಕ್ರೂರಿ ಯಾವ ಆಹಾರ ತಿನ್ನುತ್ತಾನೆ ? ಸಾತ್ವಿಕವೋ ಮಾಂಸಾಹಾರವೋ ?  ನಿರಂಜನ ಭಟ್ಟ ಎಂಬಾತ ಭಾಸ್ಕರ ಶೆಟ್ಟಿ ಎಂಬವರನ್ನು ಹಣಕ್ಕಾಗಿ ಕೊಂದು ತುಂಡು ತುಂಡು ಮಾಡಿ ಹೋಮುಕುಂಡದಲ್ಲಿ ಸುಟ್ಟು ಹಾಕಿ ಈಗ ಜೈಲಲ್ಲಿದ್ದಾನೆ. ಆತ ಮಾಂಸ ನೇತಾಡಿಸುವ ಅಂಗಡಿ ಇಟ್ಟುಕೊಂಡಿದ್ದನೇ ?  ಶಿರೂರು ಸ್ವಾಮಿಗಳು ಬದುಕಿದ್ದಾಗ ಒಂದೊಂದು ಮಠದ ಒಂದೊಂದು ಕರ್ಮಕಾಂಡವನ್ನೂ ಎಳೆಎಳೆಯಾಗಿ ಹೇಳುತ್ತಿದ್ದರು. ಮಹಿಳೆಯರ ಮೇಲೆ ದೌರ್ಜನ್ಯ, ಗರ್ಭಪಾತ, ಕೊಲೆ, ಅಧಿಕಾರ ದುರುಪಯೋಗ ನಡೆಸಿದ್ದ ಸ್ವಾಮಿಗಳ ಆಹಾರ ಯಾವುದಾಗಿತ್ತು ?' ಎಂದು ಪತ್ರಕರ್ತ ನವೀನ್ ಸೂರಿಂಜೆ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. 

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ? ಎಂದು ನೆಟ್ಟಿಗರೊಬ್ಬರು ಬರೆದು

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ

ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ
ಇವು ಮೌಲಿಕ ಶಿಕ್ಷಣದ ಸಲಹೆಗಳೇ?
1/2 pic.twitter.com/99IMT9O4v9

— Dr H.C.Mahadevappa (@CMahadevappa) January 10, 2023
share
Next Story
X