ಜನಾರ್ದನ ರೆಡ್ಡಿ ಪಕ್ಷಕ್ಕೆ ಆಹ್ವಾನಿಸಿ ಟ್ವೀಟ್ ಮಾಡಿ ಡಿಲೀಟ್ ಮಾಡಿದ ಸಚಿವ ಶ್ರೀರಾಮುಲು?
ಡಿಲೀಟ್ ಮಾಡಿದ್ದೇಕೆ? ಐಟಿ ದಾಳಿ ಮಾಡುವ ಬೆದರಿಕೆ ಬಂತೇ? ಎಂದು ಪ್ರಶ್ನಿಸಿದ ಕಾಂಗ್ರೆಸ್
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ 'ಕಲ್ಯಾಣ ರಾಜ್ಯ ಪ್ರಗತಿ' ಪಕ್ಷಕ್ಕೆ ಕಾರ್ಯಕರ್ತರು ಸೇರ್ಪಡೆಯಾಗುವ ಸಮಾರಂಭಕ್ಕೆ ಆಗಮಿಸುವಂತೆ ಸಚಿವ ಶ್ರೀರಾಮುಲು ಅವರು ಆಹ್ವಾನಿಸುವ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಚಿವರು ಮಾಡಿದ್ದರೆನ್ನಲಾದ ಟ್ವೀಟ್ನ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್ @INCKarnataka, 'ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸುವ ಟ್ವೀಟ್ ಮಾಡಿ ಡಿಲೀಟ್ ಮಾಡಿದ ಶ್ರೀರಾಮುಲು ಅವರೇ, ತಮ್ಮ ಆಪ್ತರ ಮೇಲಿನ ಐಟಿ ದಾಳಿಗೂ, ಈ ಟ್ವೀಟ್ಗೂ ಸಂಬಂಧವಿರುವಂತಿದೆ ಅಲ್ಲವೇ? ಡಿಲೀಟ್ ಮಾಡಿದ್ದೇಕೆ? ದೆಹಲಿಯಿಂದ ನಿಮ್ಮ ಮೇಲೂ ಐಟಿ ದಾಳಿ ಮಾಡುವ ಬೆದರಿಕೆ ಬಂತೇ?' ಎಂದು ಪ್ರಶ್ನೆ ಮಾಡಿದೆ.
ಇನ್ನು 'ಶ್ರೀರಾಮುಲು ಪಕ್ಷ ಬಿಡುವರೇ @BJP4Karnataka?' ಎಂದು ಬಿಜೆಪಿಯನ್ನು ಟ್ಯಾಗ್ ಮಾಡಿ ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಸ್ಕ್ರೀನ್ಶಾಟ್ ನಲ್ಲಿ ಹೀಗಿದೆ...: ''ಜನವರಿ 17ನೇ 2023ರಂದು ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮಕ್ಕೆ ಸಿಂಧನೂರಿನ ಮಹಾ ಜನತೆಯನ್ನು ಹೃದಯ ಪೂರ್ಕವಾಗಿ ಆಹ್ವಾನಿಸುತ್ತೇನೆ'' ಎಂದು ಸಚಿವ ಶ್ರೀರಾಮುಲು ಅವರದ್ದೆನ್ನಲಾದ ಅಧಿಕೃತ ಟ್ವಿಟರ್ ಖಾತೆಯಲ್ಲಿದೆ. ಸದ್ಯ ಈ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಈ ವರೆಗೆ ಸಚಿವ ಶ್ರೀರಾಮುಲು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಜನಾರ್ಧನ ರೆಡ್ಡಿಯವರ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸುವ ಟ್ವೀಟ್ ಮಾಡಿ ಡಿಲೀಟ್ ಮಾಡಿದ @sriramulubjp ಅವರೇ,
— Karnataka Congress (@INCKarnataka) January 17, 2023
ತಮ್ಮ ಆಪ್ತರ ಮೇಲಿನ ಐಟಿ ದಾಳಿಗೂ, ಈ ಟ್ವೀಟ್ಗೂ ಸಂಬಂಧವಿರುವಂತಿದೆ ಅಲ್ಲವೇ?
ಡಿಲೀಟ್ ಮಾಡಿದ್ದೇಕೆ? ದೆಹಲಿಯಿಂದ ನಿಮ್ಮ ಮೇಲೂ ಐಟಿ ದಾಳಿ ಮಾಡುವ ಬೆದರಿಕೆ ಬಂತೇ?
ರಾಮುಲು ಪಕ್ಷ ಬಿಡುವರೇ @BJP4Karnataka?#BJPvsBJP pic.twitter.com/Q4V3GH7dcz