-

ಸುಧಾಕರ್ ಒಬ್ಬ ಪೆದ್ದ, RSS ಪ್ರೀತಿಗಳಿಸಲು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

-

ಬೆಂಗಳೂರು, ಜ.25: ಸಚಿವ ಸುಧಾಕರ್ ಒಬ್ಬ ಪೆದ್ದ. ಸಿಎಜಿ ರಿಪೋರ್ಟ್ ಓದೋಕೆ, ಅರ್ಥ ಮಾಡಿಕೊಳ್ಳೋಕೆ ಬರೋದಿಲ್ಲ. ನೆನ್ನೆ ಮೊನ್ನೆ ಬಿಜೆಪಿಗೆ ಹೋದ ಈ ಮನುಷ್ಯ ತುರ್ತಾಗಿ ಆರೆಸ್ಸೆಸ್‍ನವರ ಪ್ರೀತಿಗಳಿಸಲು ಮೂಲ ಬಿಜೆಪಿಯವರಿಗಿಂತ ಭಯಾನಕ ಸುಳ್ಳು ಹೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು. 

ತಮ್ಮ ವಿರುದ್ಧ ಮಾಡಿರುವ 35 ಸಾವಿರ ಕೋಟಿ ರೂ.ಭ್ರಷ್ಟಾಚಾರದ ಆರೋಪಕ್ಕೆ ಸಮಗ್ರ ದಾಖಲೆಗಳ ಸಮೇತ ಬುಧವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಅವರು, ಸಚಿವ ಸುಧಾಕರ್ ಆರೋಪಕ್ಕೂ-ಸಿಎಜಿ ವರದಿಯಲ್ಲಿ ಇರುವುದಕ್ಕೂ ಒಂದಕ್ಕೊಂದು ಸಂಬಂಧವೆ ಇಲ್ಲ ಎಂದು ಎಳೆಎಳೆಯಾಗಿ ಬಿಚ್ಚಿಟ್ಟರು. 

ಸಿಎಜಿಯವರು 2016-17 ಸಾಲಿನ ವರದಿಯನ್ನು 2018ರಲ್ಲಿ ಕೊಟ್ಟಿದ್ದಾರೆ. ಅದರಲ್ಲಿ ಪುಟ ಸಂಖ್ಯೆ XV ರಲ್ಲಿ ಹೀಗೆ ಹೇಳಿದ್ದಾರೆ. “Non reconciliation of expenditure was to the extent of 19 percent of total expenditure” ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಹೇಳಿಕೆಯನ್ನು ಆಧರಿಸಿ 2016-17ನೆ ಸಾಲಿನ ಆರ್ಥಿಕ ವರ್ಷದ ಆಯವ್ಯಯದಲ್ಲಿ 1,86,052 ಕೋಟಿ ರೂಗಳಲ್ಲಿ ಶೇ.19(35 ಸಾವಿರ ಕೋಟಿ) ತಾಳೆಯಾಗುತ್ತಿಲ್ಲವೆಂದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದು ನನ್ನ ಸರಕಾರ ನಡೆಸಿರುವ ಅವ್ಯವಹಾರ, ಭ್ರಷ್ಟಾಚಾರಗಳನ್ನು ದೃಢೀಕರಿಸಿದಂತಾಗುತ್ತದೆ ಎಂದು ಪೆದ್ದ ಸುಧಾಕರ್ ಆರೋಪಿಸಿದ್ದಾರೆ ಎಂದು ಅವರು ಹೇಳಿದರು. 

2008-09 ರಲ್ಲಿ ತಾಳೆಯಾಗದ ಅನುದಾನ ಶೇ.49ರಷ್ಟು ಇತ್ತು. ಆಗ ಯಾವ ಸರಕಾರ ಇತ್ತು ಗೊತ್ತೇನಪ್ಪಾ ಸುಧಾಕರ? 2015-16ರಲ್ಲಿ ಶೇ.16ರಷ್ಟು ಮಾತ್ರ ತಾಳೆಯಾಗದ ಅನುದಾನ ಆಗಿತ್ತು. ಈ ಮೂರ್ಖರಿಗೆ ಇದು ಅರ್ಥ ಆಗಬೇಕಾ ಬೇಡವಾ? ಬಿಜೆಪಿಯಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದರೆ ಅತಿ ದೊಡ್ಡ ಲೀಡರ್ ಆಗಬಹುದು ಎನ್ನುವುದು ಸುಧಾಕರ್‍ಗೆ ಬಹಳ ಬೇಗ ಅರ್ಥ ಆಗಿದೆ ಎಂದು ಅವರು ಟೀಕಿಸಿದರು. 

ಈ ರೀಕನ್ಸಿಲೆಶನ್ ವಿಚಾರದಲ್ಲಿ ನಮ್ಮ ಸರಕಾರವೆ ಸಾಕಷ್ಟು ಸುಧಾರಣೆಗಳನ್ನು ಸಾಧಿಸಿದೆ ಎಂದು ವರದಿ ಹೇಳುತ್ತಿದೆ. ಇದರ ಪ್ರಕಾರ ಬಿಜೆಪಿ ಸರಕಾರದಲ್ಲಿ ಶೇ.50ರಷ್ಟು ರೀಕನ್ಸೈಲ್ ಆಗುತ್ತಿರಲಿಲ್ಲ. ಆದರೆ ನಾವು ತೆಗೆದುಕೊಂಡ ಕ್ರಮಗಳಿಂದ ಈ ಪ್ರಮಾಣ ಶೇ.16 ರಿಂದ 18 ರಷ್ಟು ಮಾತ್ರ ಬಾಕಿ ಉಳಿಯುತ್ತಿತ್ತು. ಮೆಚ್ಚುಗೆ ಸೂಚಿಸಬೇಕಾದ್ದಕ್ಕೆ ಭ್ರಷ್ಟಾಚಾರ  ಅಂತ ಕರೆದಿದೆ ಈ ಪೆದ್ದು ಎಂದು ಅವರು ವ್ಯಂಗ್ಯವಾಡಿದರು. 

ಭ್ರಷ್ಟಾಚಾರ ಎಂದರೆ ಯಾವುದು ಗೊತ್ತಾ ಸುಧಾಕರ್? ಕೊರೋನ ಸಮಯದಲ್ಲಿ ಹೆಣಗಳ ವಿಚಾರದಲ್ಲೂ ಲಂಚ ಹೊಡೆಯುವುದು ಭ್ರಷ್ಟಾಚಾರ . 2020-21ರಲ್ಲೆ ಸುಮಾರು 3000 ಕೋಟಿ ರೂ.ಗಳಷ್ಟು ಕೊರೋನ ಭ್ರಷ್ಟಾಚಾರ ನಡೆದಿದೆಯೆಂದು ಆಗಿನ ಪಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ಸ್ಪೀಕರ್‍ಗೆ ವರದಿ ಕೊಟ್ಟಿದ್ದಾರೆ. ಆದರೆ, ಈ ಸ್ಪೀಕರ್ ಮಹಾಶಯರು ವರದಿಯನ್ನು ಸದನದಲ್ಲಿ ಮಂಡಿಸದೆ ಆರೆಸ್ಸೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. 

ಕೊರೋನದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರ ಕುರಿತು ಆಡಿಟ್ ತನಿಖೆ ಮಾಡಲು ಪಬ್ಲಿಕ್ ಅಕೌಂಟ್ಸ್ ಕಮಿಟಿಯು ಎಜಿಗೆ ಪತ್ರ ಬರೆದು ಕೋರಿದ್ದರು. ಆದರೆ ಎಜಿಯವರು ಆಡಳಿತ ಇಲಾಖೆಯು ಪತ್ರ ಬರೆಯಬೇಕು ಎಂದು ತಿಳಿಸಿದ್ದರು. ಆದರೆ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಡಿಟ್ ತನಿಖೆ ಮಾಡಲು ಎಜಿಯವರಿಗೆ ಅನುಮತಿ ಕೊಡಲೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸುಧಾಕರ್ ಭ್ರಷ್ಟ ಅಲ್ಲದಿದ್ದರೆ ಆಡಿಟ್ ತನಿಖೆ ಮಾಡಲು ಒಪ್ಪಿಗೆ ಕೊಡಬೇಕಾಗಿತ್ತಲ್ಲ? ಯಾಕೆ ಅವಕಾಶ ಕೊಡಲಿಲ್ಲ? ಎನ್ನುವುದಕ್ಕೆ ಸುಧಾಕರ್ ಉತ್ತರ ಕೊಡಬೇಕು. ಕೃಷಿ, ತೋಟಗಾರಿಕೆ, ಗೃಹ ಮತ್ತು ಸಾರಿಗೆ, ಲೋಕೋಪಯೋಗಿ ಇಲಾಖೆಗಳಲ್ಲಿ 1085 ಕೋಟಿ ರೂ. ಅವ್ಯವಹಾರವಾಗಿದೆ ಎಂದು ಆರೋಪಿಸಿದ್ದಾರೆ. ಎಜಿ ಇದನ್ನು ಅವ್ಯವಹಾರ, ಭ್ರಷ್ಟಾಚಾರ ಎಂದು ಹೇಳಿಲ್ಲ. ಬಜೆಟ್‍ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚಾಗಿದೆ ಎಂದಷ್ಟೇ ವರದಿ ಹೇಳುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯ ಆಲಿಬಾಬಾ ಮತ್ತು ಚಾಲಿಸ್ ಚೋರ್‍ಗಳ ದಂಡ ನಾಯಕ ಆಗುವ ಹಠಕ್ಕೆ ಬಿದ್ದ ಸುಧಾಕರ್ ಅವರನ್ನು ಸಿಎಂ ಬೊಮ್ಮಾಯಿ ಬಫೂನ್ ಮಾಡುತ್ತಿದ್ದಾರೆ. ಬೇಕಂತಲೇ ಸುಧಾಕರ್ ಬಾಯಲ್ಲಿ ಸುಳ್ಳು ಹೇಳಿಸುತ್ತಿದ್ದಾರೆ. ಆರೆಸ್ಸೆಸ್‍ನವರು ಕೊರೋನ ಕಾಲದ ಭ್ರಷ್ಟಾಚಾರಕ್ಕೂ ಬೇಷರತ್ ಬೆಂಬಲ ನೀಡುವ ರೀತಿಯಲ್ಲಿ ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡುವುದಕ್ಕೆ ಸುಧಾಕರ್‍ರನ್ನು ಮುಂದೆ ಬಿಟ್ಟಿದ್ದಾರೆ ಎಂದು ಅವರು ಹೇಳಿದರು. 

ಬೆಂಗಳೂರಿನ ವೈಟ್ ಟಾಪಿಂಗ್ ಯೋಜನೆಯಲ್ಲಿ ಅವ್ಯವಹಾರ ನಡೆದಿತ್ತು ಎಂದು ಸುಧಾಕರ್ ಆರೋಪಿಸಿದ್ದಾರೆ. ಆದರೆ, 2019ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ತನಿಖೆ ನಡೆಸಿದ್ದರು. ತನಿಖಾ ವರದಿಯಲ್ಲಿ ಯಾವುದೆ ಅವ್ಯವಹಾರ ಆಗಿಲ್ಲ ಎಂದು ವರದಿ ಸಲ್ಲಿಕೆಯಾಗಿದ್ದು, ಅದನ್ನು ಸರಕಾರ ಅಂಗೀಕರಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top