ಪತ್ರಿಕೆಗಳ ಜಾತಿ ಹುಡುಕಿ ಜಾಹಿರಾತು ನೀಡಲು ಹೊರಟ ಬಿಜೆಪಿ ಸರ್ಕಾರ: ಪ್ರಿಯಾಂಕ್ ಖರ್ಗೆ ಟೀಕೆ
ಬ್ರಾಹ್ಮಣ ಒಡೆತನದಲ್ಲಿರುವ ಪತ್ರಿಕೆಗಳಿಗೆ ಜಾಹಿರಾತು ನೀಡುವಂತೆ ಸುತ್ತೋಲೆ
ಬೆಂಗಳೂರು: ಬಿಜೆಪಿ ಸರ್ಕಾರ ಪತ್ರಿಕೆಗಳ ಜಾತಿ ಮೂಲ ಹುಡುಕಿ ಜಾಹಿರಾತು ನೀಡಲು ಹೊರಟಿದೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಈ ಬಗ್ಗೆ ಇಲಾಖೆಯ ಸುತ್ತೋಲೆಯೊಂದಿಗೆ ಟ್ವೀಟ್ ಮಾಡಿರುವ ಅವರು, "ಬ್ರಾಹ್ಮಣ ಸಮುದಾಯದ ವ್ಯಕ್ತಿಗಳ ಒಡೆತನದಲ್ಲಿ ಇರುವ ಪತ್ರಿಕೆಗಳಿಗೆ ಪ್ರತಿ ತಿಂಗಳು ಜಾಹಿರಾತು ನೀಡುವ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳು 2 ಪುಟಗಳ ಸರ್ಕಾರದ ಜಾಹಿರಾತು ಬ್ರಾಹ್ಮಣರ ಮಾಲಕತ್ವದ ಪತ್ರಿಕೆಗಳಿಗೆ ಮಾತ್ರವಂತೆ! ಉಳಿದ ಜಾತಿಯವರದ್ದು ಪತ್ರಿಕೆಗಳಲ್ಲವೇ ಮುಖ್ಯಮಂತ್ರಿ ಬೊಮ್ಮಾಯಿ ಅವರೇ?. ಮುಖ್ಯಮಂತ್ರಿ ಅವರು ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ" ಎಂದು ಟೀಕಿಸಿದ್ದಾರೆ.
ಸುತ್ತೋಲೆನಲ್ಲೇನಿದೆ?: ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತೀ ತಿಂಗಳು ಎರಡು ಪುಟಗಳ ಜಾಹಿರಾತು ಬಿಡುಗಡೆ ಮಾಡುವಂತೆ ಜ.13ರ ವಾರ್ತಾ ಇಲಾಖೆಯ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಸುತ್ತೋಲೆಯಲ್ಲಿ ವಾರ್ತಾ ಇಲಾಖೆಯ ಆಯುಕ್ತರ ಪರವಾಗಿ ಉಪನಿರ್ದೇಶಕರಾದ ಕೆ.ಪಿ. ಪುಟ್ಟಸ್ವಾಮಯ್ಯ ಅವರ ಸಹಿಯಿದ್ದು, ಸುತ್ತೋಲೆಯು ಸರ್ಕಾರದ ಆದೇಶದಂತೆ ಹೊರಡಿಸಲಾಗಿದೆ.
ಪತ್ರಿಕೆಗಳ ಜಾತಿ ಮೂಲ ಹುಡುಕಿ ಜಾಹಿರಾತು ನೀಡಲು ಹೊರಟಿದೆ ಬಿಜೆಪಿ ಸರ್ಕಾರ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 27, 2023
ಪ್ರತಿ ತಿಂಗಳು 2 ಪುಟಗಳ ಸರ್ಕಾರದ ಜಾಹಿರಾತು ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೆ ಮಾತ್ರವಂತೆ!
ಉಳಿದ ಜಾತಿಯವರದ್ದು ಪತ್ರಿಕೆಗಳಲ್ಲವೇ @BSBommai ಅವರೇ?
ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ ಸಿಎಂ. pic.twitter.com/BDNC4kQtXT