Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಚ್ಛೇದನ ಬಳಿಕ ನೋಡಲು ಬಾರದ ತಂದೆ:...

ವಿಚ್ಛೇದನ ಬಳಿಕ ನೋಡಲು ಬಾರದ ತಂದೆ: ವಿದೇಶದಲ್ಲಿ ಮಗುವಿನೊಂದಿಗೆ ನೆಲೆಸಲು ತಾಯಿಗೆ ಅನುಮತಿಸಿದ ಹೈಕೋರ್ಟ್

28 Jan 2023 8:15 PM IST
share
ವಿಚ್ಛೇದನ ಬಳಿಕ ನೋಡಲು ಬಾರದ ತಂದೆ: ವಿದೇಶದಲ್ಲಿ ಮಗುವಿನೊಂದಿಗೆ ನೆಲೆಸಲು ತಾಯಿಗೆ ಅನುಮತಿಸಿದ ಹೈಕೋರ್ಟ್

ಬೆಂಗಳೂರು, ಜ.28: ವಿಚ್ಛೇದನದ ಬಳಿಕ ಎಂಟು ವರ್ಷ ಕಳೆದರೂ ತಂದೆಯಾದವರು ಮಗುವನ್ನು ಭೇಟಿ ಮಾಡಲು ಮುಂದಾಗದ ಹಾಗೂ ಪ್ರಕರಣದ ವಿಚಾರವಾಗಿ ಕೋರ್ಟ್‍ಗೂ ಹಾಜರಾಗದ ಕಾರಣ ಮಗುವಿನೊಂದಿಗೆ ತಾಯಿ ಆಸ್ಟ್ರೇಲಿಯಾದಲ್ಲಿ ನೆಲೆಸಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. 

ವಿಚ್ಛೇದನದ ಬಳಿಕ ಎರಡನೆ ವಿವಾಹವಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ತಾನು ಮತ್ತು ತನ್ನ ಮಗುವಿಗೆ ಅಲ್ಲಿಯೇ ನೆಲೆಸಲು ಶಾಶ್ವತ ವೀಸಾ ಪಡೆಯಲು ಅನಮತಿಸುವಂತೆ ಕೋರಿ ರೇಖಾ ಸಲ್ಲಿಸಿದ್ದ ಅರ್ಜಿಯನ್ನು ಮದ್ದೂರಿನ ಸಿವಿಲ್ ನ್ಯಾಯಾಲಯ ವಜಾಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿದ್ದು, ಮಗುವಿನೊಂದಿಗೆ ತಾಯಿ ಆಸ್ಟ್ರೇಲಿಯಾದಲ್ಲಿ ನೆಲೆಸುವುದಕ್ಕಾಗಿ ಅವಕಾಶ ಕಲ್ಪಿಸಿದೆ. 

ಅಲ್ಲದೆ, ಮಗುವನ್ನು ವಿದೇಶಕ್ಕೆ ಕರೆದೊಯ್ಯಲು ಅನುಮತಿಸಲು ಮತ್ತೊಂದು ಅರ್ಜಿ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನೂ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣವೇನು?: ಮದ್ದೂರಿನ ರೇಖಾ ಮತ್ತು ಕುಣಿಗಲ್‍ನ ಹರೀಶ್(ಎಲ್ಲರ ಹೆಸರುಗಳನ್ನು ಬದಲಾಯಿಸಲಾಗಿದೆ) 2006ರಲ್ಲಿ ವಿವಾಹವಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದಾದ ಕೆಲ ದಿನಗಳ ಬಳಿಕ ಇಬ್ಬರ ನಡುವಿನ ವಿವಾದದಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪ್ರಾಪ್ತ ವಯಸ್ಸಿನ ಮಗನನ್ನು ತಾಯಿಯ ಆರೈಕೆಯಲ್ಲಿರಲು ಅವಕಾಶ ನೀಡಿತ್ತು. ಜತೆಗೆ, ತಿಂಗಳಿಗೆ ಒಮ್ಮೆ ಮಗುವನ್ನು ಭೇಟಿ ಮಾಡಲು ತಂದೆಗೆ ಅವಕಾಶ ನೀಡಿ ವಿಚ್ಛೇದನ ಮಂಜೂರು ಮಾಡಿತ್ತು. ಆದರೆ, ವಿಚ್ಛೇದನದ ಬಳಿಕ ಪತಿ ಒಮ್ಮೆಯೂ ಮಗನನ್ನು ಭೇಟಿ ಮಾಡಲು ಆಗಮಿಸಿರಲಿಲ್ಲ. ಇದಾದ ಬಳಿಕ ರೇಖಾ ಮತ್ತೊಂದು ವಿವಾಹವಾಗಿದ್ದು ಪ್ರವಾಸಿ ವೀಸಾ ಪಡೆದು ಮಗುವಿನೊಂದಿಗೆ ತನ್ನ ಎರಡನೆ ಪತಿಯ ಜತೆ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದರು. 

share
Next Story
X