-

ದಿವ್ಯಾಂಗರು ದೇವರ ಮಕ್ಕಳು, ಅವರಿಗೆ ವಿಶೇಷ ಗೌರವ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

-

ಮೈಸೂರು: ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ  ತಿಳಿಸಿದರು.

ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ರವಿವಾರ  ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ವತಿಯಿಂದ  ಹಮ್ಮಿಕೊಂಡಿದ್ದ ಸಾಮಾಜಿಕ ಅಧಿಕಾರಿತಾ ಶಿಬಿರ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಮಿತಿ ಇಲ್ಲ. ಅಗತ್ಯ ಸಲಕರಣೆಗಳನ್ನು ವಿತರಿಸಬಹುದು. ನಾನು ಅಧಿಕಾರಕ್ಕೆ ಬಂದ ತಕ್ಷಣ ವಿಕಲಚೇತನರಿಗೆ ಮಾಶಾಸನ ಹೆಚ್ಚಿಸಲಾಗಿದೆ. ರಾಜ್ಯ ಸರಕಾರವು ಇದೆ ರೀತಿ ಕಾರ್ಯಕ್ರಮಗಳನ್ನು ಮಾಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು. ಬಜೆಟ್ ನಲ್ಲಿ ವಿಕಲಚೇತನರಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಇದರ ಪ್ರಯೋಜನ ವಿಕಲಚೇತನರಿಗೆ ತಲುಪಬೇಕು. ಎಲ್ಲಾ ವರ್ಗದ ಜನ ಅಭಿವೃದ್ಧಿ ಆಗಬೇಕು. ಆಗ ಸಮಾಜ ಅಭಿವೃದ್ಧಿ ಆಗುತ್ತದೆ ಎಂದರು.

ಚಾಮರಾಜನಗರ ಲೋಕಸಭಾ ಸದಸ್ಯ  ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ ಅಲಿಂಕೊ ಸಂಸ್ಥೆಯಿಂದ ವಿಕಲಚೇತನರಿಗೆ ಕೃತಕ ಅಂಗಾಂಗಳ ಜೋಡಣೆಯನ್ನು ಮಾಡುತ್ತಾ ಬಂದಿದೆ. ಇದೊಂದು ಮಾನವೀಯ ಸೇವೆಗೆ ಸಂಬಂದಿಸಿದ ಕಾರ್ಯಕ್ರಮ. ದೇಶದ 68 ಲೋಕಸಭಾ ಕ್ಷೇತ್ರಗಳಲ್ಲಿ ಇದೆ ರೀತಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಕರ್ನಾಟಕದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ಆಯ್ಕೆಯಾಗಿದೆ ಇದು ನಮ್ಮ ಸುದೈವ. ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ. ಚಾಮರಾಜನಗರದಲ್ಲಿ 1690 ವಿಕಲ ಚೇತನರಿಗೆ ವಿತರಿಸಲಾಗಿದೆ. ಇಂದು ನಂಜನಗೂಡಿನಲ್ಲಿ 1691 ಜನರಿಗೆ 1.5 ಕೋಟಿ ವೆಚ್ಚದಲ್ಲಿ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು. 

ಜಿಲ್ಲಾಧಿಕಾರಿ‌ ಡಾ. ಕೆ. ವಿ ರಾಜೇಂದ್ರ ಅವರು ಮಾತನಾಡಿ 1500 ವಿಕಲಚೇತನ  ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ ನಡೆಯುತ್ತಿದೆ. ಇದರಿಂದ ವಿಕಲಚೇತನರಿಗೆ ಹೆಚ್ಚಿನ ಅನುಕೂಲ ಆಗುತ್ತದೆ. ಕೃತಕ ಅಂಗಾಂಗಳ ಜೋಡಣೆಯನ್ನು ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಹರ್ಷವರ್ಧನ್, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ  ಕೋಟೆ ಶಿವಣ್ಣ, ಕಾವೇರಿ ನೀರಾವರಿ ನಿಗಮದ ಅಧ್ಯಕ್ಷ ನಿಜಗುಣರಾಜು, ನಗರಸಭಾ ಉಪಾಧ್ಯಕ್ಷೆ ನಾಗಮಣಿ, ಪ್ರಾದೇಶಿಕ ಆಯುಕ್ತ ಬಿ.ಜಿ. ಪ್ರಕಾಶ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಆರ್ ಲೋಕನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top