ಸಾಹಿತಿ, ವಿಮರ್ಶಕ ಕೆ.ವಿ. ತಿರುಮಲೇಶ್ ನಿಧನ
ಬೆಂಗಳೂರು: ಖ್ಯಾತ ಸಾಹಿತಿ, ಅನುವಾದಕ, ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ (80) ಅವರು ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ನಿಧನರಾಗಿರುವುದಾಗಿ ವರದಿಯಾಗಿದೆ.
ಕೇರಳದ ಕಾಸರಗೋಡಿನ ಕಾರಡ್ಕ ಗ್ರಾಮದಲ್ಲಿ ತಿರುಮಲೇಶ್ ಅವರು ಜನಿಸಿದ್ದರು. ಸದ್ಯ ಹೈದರಾಬಾದಿನಲ್ಲಿ ವಾಸವಿದ್ದರು. ಹೈದರಾಬಾದ್ನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಬೇಂದ್ರೆಯವರ ಕಾವ್ಯಶೈಲಿ, ಸಮ್ಮುಖ, ಉಲ್ಲೇಖ, ಕಾವ್ಯಕಾರಣ ವಿಮರ್ಶಾ ಕೃತಿ ರಚಿಸಿದ್ದ ತಿರುಮಲೇಶ್, ಅಕ್ಷಯ ಕಾವ್ಯ, ಅರಬ್ಬಿ, ಪಾಪಿಯೂ, ಮುಖವಾಡಗಳು, ವಠಾರ ಸೇರಿ ಹಲವು ಕವನ ಸಂಕಲನ ಹೊರತಂದಿದ್ದರು. ಇವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿವೆ.
"ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
— CM of Karnataka (@CMofKarnataka) January 30, 2023
1/2 pic.twitter.com/Bme553eCFB