ಶಿವಮೊಗ್ಗ: ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಶಿವಮೊಗ್ಗ: ಚಲಾಯಿಸುವಾಗ ಕಾರಿನಲ್ಲಿ ಏಕಾಏಕಿ ಬೆಂಕಿಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಕಾರು ಹೊತ್ತಿರ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ.
ಕಾರು ಚಲಾಯಿಸುವಾಗ ಕಾರು ಮುಂಭಾಗದಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದು, ಚಾಲಕ ಶ್ರೀಕಾಂತ್ ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು – ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋಗಿದೆ.
Next Story