-

ಕೇಂದ್ರ ಬಜೆಟ್ 2023-24 | ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿಲ್ಲ: ವಿ.ಪಿ.ನಿರಂಜನಾರಾಧ್ಯ

-

ನಿರ್ಮಲಾ ಸೀತಾರಾಮನ್ | ನಿರಂಜನಾರಾಧ್ಯ ವಿ.ಪಿ

ಬೆಂಗಳೂರು, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಕೇಂದ್ರ ಬಜೆಟ್ ಕೇವಲ ನಿರಾಶಾದಾಯಕ ಮಾತ್ರವಲ್ಲ ಸಂವಿಧಾನದಲ್ಲಿನ ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿ ಜಾರಿಗೊಳಿಸಲು ವಿಫಲವಾಗಿದೆ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯದ ಪ್ರಧಾನ ಸಂಚಾಲಕ ನಿರಂಜನಾರಾಧ್ಯ ವಿ.ಪಿ ತಿಳಿಸಿದ್ದಾರೆ. 

ಬುಧವಾರ ಪತ್ರಿಕಾ ಪ್ರಕಟನೆಯನ್ನು ಹೊರಡಿಸಿರುವ ನಿರಂಜನಾರಾಧ್ಯ ಅವರು, ಒಕ್ಕೂಟ ಆಯವ್ಯಯ 2023-24, ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ನಿರಾಶೆಯನ್ನು ತಂದಿದೆ ಎಂದು ತಿಳಿಸಿದ್ದಾರೆ.  

ಗುಣಮಟ್ಟದ ಶಿಕ್ಷಣದ ಪ್ರಾಮುಖ್ಯತೆಯನ್ನು ಹಣಕಾಸು ಸಚಿವರು ಪ್ರಸ್ತಾಪಿಸಿದರೂ, ಅದನ್ನು ಎಲ್ಲ ಮಕ್ಕಳಿಗೆ ಸಮಾನತೆಯ ನೆಲೆಯಲ್ಲಿ ಒದಗಿಸಲು ಅಗತ್ಯವಾದ ಹಣಕಾಸು ಸಂಪನ್ಮೂಲಗಳನ್ನು ಆಯವ್ಯಯದಲ್ಲಿ ಒದಗಿಸಲು ಅವರು ಪೂರ್ಣ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. 

ಶಿಕ್ಷಣ ವ್ಯವಸ್ಥೆಯು ಸಾಂಕ್ರಾಮಿಕ ಹೊಡೆತದಿಂದ ಉಂಟಾದ ಕಲಿಕಾ ನಷ್ಟದಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹಣಕಾಸು ಸಚಿವರು ಈ ವಿಷಯವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ, ಇದಕ್ಕೆ ಪರಿಹಾರ ಕಂಡುಕೊಳ್ಳಲು ಕಲಿಕೆಯನ್ನು ಸಮಗ್ರವಾಗಿ ಅರ್ಥೈಸಿ ಅಗತ್ಯ ಸಾಂಸ್ಥಿಕ ಸುಧಾರಣೆಗಳ ಮೂಲಕ ಒಟ್ಟು ಕಲಿಕಾ ಪ್ರಕ್ರಿಯೆಯನ್ನು ಪುನಶ್ಚೇತನಗೊಳಿಸಲು ಆಯವ್ಯಯದಲ್ಲಿ ಗಣನೀಯ ಪ್ರಮಾಣದ ಹಣಕಾಸನ್ನು ಒದಗಿಸುವಲ್ಲಿ ಅವರು ಸೋತಿದ್ದಾರೆ ಎಂದರು. 

ಈಗಷ್ಟೇ ಬಿಡುಗಡೆಯಾದ ಆರ್ಥಿಕ ಸಮೀಕ್ಷೆ 2022-23 ರಲ್ಲಿ ಸೂಚಿಸಿದಂತೆ, ಭಾರತದಲ್ಲಿ ಶಿಕ್ಷಣಕ್ಕೆ ದೊರಕಿರುವ ಶೇಕಡಾವಾರು ಜಿಡಿಪಿಯ ಕಳೆದ ನಾಲ್ಕು ಸತತ ಹಣಕಾಸು ವರ್ಷಗಳಿಂದ ಶೇಕಡ 2.9 ರಲ್ಲಿಯೇ ಸ್ಥಗಿತಗೊಂಡಿದೆ . ಸಾಮಾಜಿಕ ಸೇವೆಗಳ ಕೊಡಮಾಡುತ್ತಿರುವ ಒಟ್ಟು ವೆಚ್ಚದಲ್ಲಿ ಶಿಕ್ಷಣಕ್ಕೆ ಮೀಸಲಿಟ್ಟ ವೆಚ್ಚವು 2015-16 ರಲ್ಲಿ ಶೇ.10.4 ರಿಂದ 2022-23ಕ್ಕೆ 9.5 ಕ್ಕೆ ಕುಸಿದಿದೆ ಎಂದು ಸಮೀಕ್ಷೆಯು ತೋರಿಸಿದೆ ಎಂದು ಹೇಳಿದರು. 

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಆಯವ್ಯಯದಲ್ಲಿ ಗಣನೀಯ ಹಣಕಾಸು ಒದಗಿಸದಿದ್ದರೆ, ಅದು ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣಕ್ಕೆ ದಾರಿ ಮಾಡಿಕೊಡುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಹಣಕಾಸು ಸಚಿವರು, ಈ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬದಲು, ಮುಂದಿನ ಮೂರು ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,000 ಶಿಕ್ಷಕರನ್ನು ನೇಮಿಸುವುದಾಗಿ ಪ್ರಸ್ತಾಪಿಸಿದ್ದಾರೆ ಎಂದರು. 

ಶಿಕ್ಷಣ ಹಕ್ಕು ಕಾಯಿದೆ ಅನುಷ್ಠಾನದ ಸಾಧನವಾಗಿರುವ ಸಮಗ್ರ ಶಿಕ್ಷಾ ಅಭಿಯಾನಕ್ಕೆ 37,453 ಕೋಟಿಗಳನ್ನು ಮೀಸಲಿಡಲಾಗಿದೆ. ಇದು ಕಳೆದ ಸಾಲಿನ ಮೊತ್ತಕ್ಕಿಂತ 70 ಕೋಟಿಗಳ ಹೆಚ್ಚಳವಾಗಿದೆ. ಆದರೆ, ಇದು ಅತ್ಯಲ್ಪ ಹೆಚ್ಚಳವಾಗಿದ್ದು ಪ್ರತಿಶತ 0.19 ರಷ್ಟು ಮಾತ್ರ ಹೆಚ್ಚಿದೆ ಎಂದರು. 

ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಎಂದು ಮರುನಾಮಕರಣ ಮಾಡಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಆಯವ್ಯಯದಲ್ಲಿ ನೀಡಿರುವ ಮೊತ್ತ ಕಳೆದ ಸಾಲಿಗೆ ಹೋಲಿಸಿದರೆ 1367 ಕೋಟಿ ಜಾಸ್ತಿಯಾಗಿದೆ. ಆದರೆ, ಇದು ಕಳೆದ ಸಾಲಿನ ಪರಿಷ್ಕೃತ ಆಯವ್ಯಯದ ಮೊತ್ತಕ್ಕಿಂತ 1200 ಕೋಟಿ ರೂ. ಕಡಿಮೆಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ಉಪಾಹಾರವನ್ನು ಒದಗಿಸಲು ಭರವಸೆ ನೀಡಿ 2 ವರ್ಷ ಕಳೆದಿದೆ. ಈ ಅತ್ಯಲ್ಪ ಹೆಚ್ಚಳದಿಂದ ಯಾವ ರೀತಿಯ ಪೋಷಣ್ ಶಕ್ತಿ ನಿರ್ಮಾಣ್ ಆಗಬಹುದೆಂದು ಜನರು ತೀರ್ಮಾನಿಸಬೇಕಿದೆ ಎಂದು ನಿರಂಜನಾರಾಧ್ಯ ತಿಳಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top