ನಟ ಸುದೀಪ್ ಭೇಟಿ ವಿಚಾರ: ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ನಟ ಸುದೀಪ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಇಬ್ಬರು ಭೇಟಿಯಾಗಿರುವ ಫೋಟೊಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ವಿಚಾರವಾಗಿ ಕೋಲಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, 'ನಟ ಸುದೀಪ್ ಜೊತೆ ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್ , ''ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಸುದೀಪ್ ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದೆ'' ಎಂದು ಬರೆದುಕೊಂಡಿದ್ದಾರೆ.
ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಶ್ರೀ @KicchaSudeep ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದೆ. pic.twitter.com/gXio5ZDW4P
— DK Shivakumar (@DKShivakumar) February 3, 2023