-

ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? #AnswerMadiModi: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

-

ಬೆಂಗಳೂರು, ಫೆ. 6: ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ಒಂದಿಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸೋಮವಾರ #AnswerMadiModi ಹ್ಯಾಶ್ ಟ್ಯಾಗ್ ನಡಿಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ , ಈ ಕೆಳಗಿನ ಪ್ರಶ್ನೆಗಳಿಗೆ ತಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ. ತಮಗೆ ತಿಳಿದಿರುವಂತೆ ಬಡಜನರ ಹಸಿದ ಹೊಟ್ಟೆಯನ್ನು ತಣಿಸಲು ಯುಪಿಎ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿಗೆ ತಂದು 80 ಕೋಟಿ ಜನರಿಗೆ ಆಹಾರಧಾನ್ಯ ವಿತರಿಸಿತ್ತು. ಆದರೆ ನಿಮ್ಮ ಸರ್ಕಾರ  ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್ ನಲ್ಲಿ ಆಹಾರ ಸಬ್ಸಿಡಿಯನ್ನು ಶೇ. 31ರಷ್ಟು ಕಡಿತಗೊಳಿಸಿ ಬಡವರ ಹೊಟ್ಟೆಗೆ ಕಲ್ಲು ಹಾಕಿದೆ, ಯಾಕೆ? ಎಂದು ಕೇಳಿದ್ದಾರೆ.

''ರೈತರ ವಿರುದ್ದ ಸೇಡು ತೀರಿಸಿಕೊಳ್ಳುತ್ತಿದ್ದೀರಾ?''

ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇನೆ ಎಂದು ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರಿ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ರೂ.50,121 ಕೋಟಿಯಷ್ಟು ಕಡಿಮೆ ಮಾಡಿದ್ದೀರಿ. ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆ ನೀಡುವ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಿಸಲು ನೀಡಲಾಗುತ್ತಿದ್ದ ಅನುದಾನವನ್ನು ರೂ.1500 ಕೋಟಿಗಳಿಂದ ರೂ. ಒಂದು ಲಕ್ಷಕ್ಕೆ ಇಳಿಸಿದ್ದೀರಿ, ಬೆಲೆ ಕುಸಿತ ಮತ್ತು ಬೀಜ-ಗೊಬ್ಬರದ ಬೆಲೆ ಏರಿಕೆಯಿಂದಾಗಿ ಹತ್ತಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಹೀಗಿದ್ದರೂ ಹತ್ತಿ ನಿಗಮದ ಬೆಂಬಲ ಬೆಲೆಯ ಅನುದಾನವನ್ನು ರೂ.782 ಕೋಟಿಯಿಂದ ರೂ. 1 ಲಕ್ಷಕ್ಕೆ ಇಳಿಸಿದ್ದೀರಿ.ರೈತರಿಗೆ ನೆರವಾಗುವ ಯೋಜನೆಗಳನ್ನೇ ಸ್ಥಗಿತಗೊಳಿಸಿ ರೈತರ ವಿರುದ್ದ ಸೇಡು ತೀರಿಸಿಕೊಳ್ಳುತ್ತಿದ್ದೀರಾ? ಎಂದು ಅವರು ಟೀಕಿಸಿದ್ದಾರೆ.

 ''ಉದ್ಯೋಗವನ್ನು ಕಸಿದುಕೊಂಡ ಮೋದಿ'':

ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳ ಪಾಲಿನ ಸಂಜೀವಿನಿ ನರೇಗಾ ಯೋಜನೆಯನ್ನು ಜಾರಿಗೆ ತಂದಿರುವುದು ಯುಪಿಎ ಸರ್ಕಾರ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನರೇಗಾಕ್ಕೆ ನೀಡಲಾಗುವ ಸಹಾಯಧನವನ್ನು ಶೇಕಡಾ 21.66ರಷ್ಟು (ರೂ.60,000 ಕೋಟಿ) ಕಡಿಮೆ ಮಾಡಲಾಗಿದೆ. ನಿಮ್ಮ ಆಡಳಿತಾವಧಿಯಲ್ಲಿ ನಿರುದ್ಯೋಗದ ಪ್ರಮಾಣದ ಹೆಚ್ಚಳ ಹೊಸ ದಾಖಲೆ ನಿರ್ಮಿಸಿದೆ. ಈಗ ಗ್ರಾಮೀಣ ಜನತೆಯಿಂದಲೂ ಉದ್ಯೋಗವನ್ನು ಕಸಿದುಕೊಂಡು ಏನನ್ನು ಸಾಧಿಸಲು ಹೊರಟಿದ್ದೀರಿ?

''ಬಡವರ ಮೆಲೆ ಯಾಕೆ ನಿಮಗಿಷ್ಟು ದ್ವೇಷ?''

 ಉಚಿತ ಎಲ್ ಪಿಜಿ ಸಿಲಿಂಡರ್ ಎಂಬ ಪೊಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರಿ, ಕಳೆದ ಎಂಟು ವರ್ಷಗಳಿಂದ ಎಲ್ ಪಿ ಜಿ ಸಿಲಿಂಡರ್ ಬೆಲೆ ದುಪ್ಪಟ್ಟಾಗಿದೆ. ಹಳ್ಳಿಯಬಡವರು ಮತ್ತೆ ಉರುವರಲು ಹಾಕಿ ಒಲೆ ಉರಿಸಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಇದರ ಹೊರತಾಗಿಯೂ ಎಲ್ ಪಿಜಿ ಮೇಲಿನ ಸಬ್ಸಿಡಿಯನ್ನು ಶೇಕಡಾ 75ರಷ್ಟು (ರೂ.2,257 ಕೋಟಿ) ಕಡಿಮೆ ಮಾಡಲಾಗಿದೆ. ಅಸಹಾಯಕ ಬಡವರ ಮೆಲೆ ಯಾಕೆ ನಿಮಗಿಷ್ಟು ದ್ವೇಷ?.

''ಭಾರತದ ಮಾನ ಹರಜಾಗುತ್ತಿದೆ'' :

ನಿಮ್ಮ ಖಾಸಾ ಸ್ನೇಹಿತರಾದ ಗೌತಮ್ ಅದಾನಿ ಉದ್ಯಮ ಸಾಮ್ರಾಜ್ಯದ ಕಳ್ಳಾಟಗಳನ್ನು ಹಿಂಡನ್ ಬರ್ಗ್ ವರದಿ ಬೆತ್ತಲೆ ಮಾಡಿದೆ. ಈ ಕಳ್ಳಾಟದಿಂದ ಭಾರತದ ಆರ್ಥಿಕತೆ ಕುಸಿದುಹೋಗುವ ಅಪಾಯ ಎದುರಿಸುತ್ತಿದೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಇದು ಸುದ್ದಿಯಾಗಿ ಭಾರತದ ಮಾನ ಹರಜಾಗುತ್ತಿದೆ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟವರು, ಎಲ್ ಐಸಿಯಲ್ಲಿ ಪಾಲಿಸಿ ಖರೀದಿಸಿದವರು ಆತಂಕದಲ್ಲಿದ್ದಾರೆ. ವಿರೋಧ ಪಕ್ಷಗಳ ನಾಯಕರು ಕೂತರೂ ನಿಂತರೂ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಗಟ್ಟುತ್ತಿರುವ ಕೇಂದ್ರ ಸರ್ಕಾರ  ಉದ್ಯಮಿ ಅದಾನಿ ಹಗರಣದ ಬಗ್ಗೆ ತನಿಖೆ ಮಾಡಲು ಹಿಂಜರಿಯುತ್ತಿರುವುದೇಕೆ?

ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ವೆಚ್ಚದ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರವೇ ಈ ಬಜೆಟ್ ನಲ್ಲಿ ಕೊಟ್ಟಿರುವುದು ಕೇವಲ ರೂ.2300 ಕೋಟಿ. ಯೋಜನೆ ಮುಗಿಯುವುದು 2050ಕ್ಕೋ? ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ಬೆಂಗಳೂರು ಮೆಟ್ರೋ ಯೋಜನೆಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ನರೇಂದ್ರಮೋದಿಯವರಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top