ಕೆಎಸ್ಸಾರ್ಟಿಸಿಗೆ ಗೌರ್ನೆನ್ಸ್ ನೌ ಒಂಬತ್ತನೇ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆ ಪ್ರಶಸ್ತಿ
ಬೆಂಗಳೂರು, ಫೆ. 16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಪ್ರತಿಷ್ಠಿತ ಗೌರ್ನೆನ್ಸ್ ನೌ ಒಂಬತ್ತನೇ ಸಾರ್ವಜನಿಕ ಉದ್ದಿಮೆಗಳ ಪ್ರಶಸ್ತಿಯನ್ನು ಪಡೆದಿದೆ. ಈ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ ಅವರು ಹೊಸದಿಲ್ಲಿಯಲ್ಲಿ ನಿಗಮಕ್ಕೆ ಪ್ರಧಾನ ಮಾಡಿದ್ದಾರೆ.
ದೇಶದ ಬೆಳವಣಿಗೆಗೆ ಪ್ರಮುಖವಾಗಿರುವ ಸಾರ್ವಜನಿಕ ವಲಯದ ಉದ್ಯಮಗಳ ಪ್ರಯತ್ನಗಳನ್ನು ಗೌರವಿಸುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ. ಕೆಎಸ್ಸಾರ್ಟಿಸಿಯನ್ನು ಎಚ್ಆರ್-ಎಕ್ಸಲೆನ್ಸ್ ವಿಭಾಗದ ಅಡಿಯಲ್ಲಿ ಆಯ್ಕೆ ಮಾಡಲಾಗಿದೆ.ನಾಮನಿರ್ದೇಶನಗಳನ್ನು ಪ್ರಖ್ಯಾತ ತೀರ್ಪುಗಾರ ಸದಸ್ಯರು 6 ವಿಭಿನ್ನ ನಿಯತಾಂಕಗಳ ಅಡಿಯಲ್ಲಿ ಮೌಲ್ಯಮಾಪನ ಮಾಡಿದ್ದಾರೆ
Next Story