ರಾಜಕೀಯ ನಿವೃತ್ತಿ ಘೋಷಣೆ ವದಂತಿ: ತನ್ವೀರ್ ಸೇಠ್ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗ
ಮೈಸೂರು: ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆಂಬ ವದಂತಿ ಹಿನ್ನೆಲೆ ಅವರ ನಿವಾಸದ ಎದುರು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಡಿಸೆಂಬರ್ ನಲ್ಲಿ ಪತ್ರ ಬರೆದಿದ್ದು, ಅನಾರೋಗ್ಯದ ಕಾರಣ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆನ್ನಲಾಗಿದೆ.
ರಾಜಕೀಯ ನಿವೃತ್ತಿ ಬಗ್ಗೆ ಪತ್ರ ಬರೆದಿದ್ದಾರೆಂಬ ವಿಷಯ ತಿಳಿಯುತ್ತಿದ್ದಂತೆ ತನ್ವೀರ್ ಸೇಠ್ ನಿವಾಸದ ಎದುರು ಜಮಾಯಿಸಿದ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಂಬಲಿಗನೋರ್ವ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ.
ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಗ್ಗೆ ಶಾಸಕ ತನ್ವೀರ್ ಸೇಠ್ ಹೇಳಿದ್ದೇನು?
Next Story