ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾ: ಮಲೆ ಮಹದೇಶ್ವರ ಬೆಟ್ಟದಿಂದ 'BJP ವಿಜಯ ಸಂಕಲ್ಪ ಯಾತ್ರೆ'ಗೆ ಚಾಲನೆ
ಚಾಮರಾಜನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಯ ವಾಹನಕ್ಕೆ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಿಂದ ಚಾಲನೆ ನೀಡಿದ್ದಾರೆ.
ಹನೂರು ತಾಲೂಕಿನ ಮಲೆಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯಸಭಾ ಸದಸ್ಯ ಜಗ್ಗೇಶ್ ಇತರರಿದ್ದರು.
Inaugurating the Vijaya Sankalpa Ratha Yatra in Distt. Chamarajanagara, Karnataka.
— Jagat Prakash Nadda (@JPNadda) March 1, 2023
https://t.co/ZUDKiXriOk
Next Story