ಕಸಾಪ ಸದಸ್ಯತ್ವದಿಂದ ನಿರ್ಮಲಾ ಯಲಿಗಾರ್ ಅಮಾನತ್ತು, ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ ಹಿಂಪಡೆದ ಪರಿಷತ್
-

ಬೆಂಗಳೂರು, ಮಾ. 9: ಕಸಾಪ ಧ್ಯೇಯೋದ್ದೇಶಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನದ ಸಹಾಯಕ ನಿರ್ದೇಶಕಿ ನಿರ್ಮಲಾ ಸಿ.ಯಲಿಗಾರ್ ಅವರನ್ನು ಕಸಾಪ ಸದಸ್ಯತ್ವ ದಿಂದ ಮುಂದಿನ ಆದೇಶದ ವರೆಗೆ ಅಮಾನತ್ತಿನಲ್ಲಿರಿಸಲಾಗಿದೆ. ಜೊತೆಗೆ ಅವರಿಗೆ ಪ್ರಕಟಿಸಲಾದ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಯ ಆಯ್ಕೆಯನ್ನು ಹಿಂಪಡೆಯಲಾಗಿದೆ.
ನಿರ್ಮಲಾ ಸಿ.ಯಲಿಗಾರ್ ಅವರು ಜನವರಿ 6, 7 ಹಾಗೂ 8 ರಂದು ಮೂರು ದಿನಗಳ ಕಾಲ ಹಾವೇರಿಯಲ್ಲಿ ಜರುಗಿದ 86ನೆ ಸಾಹಿತ್ಯ ಸಮ್ಮೇಳನದಲ್ಲಿ ಚಂದನದ ಕಾರ್ಯಕ್ರಮ ಮುಖ್ಯಸ್ಥರು ಎಂದು ಹೇಳಿಕೊಂಡು ಭಾಗವಹಿಸಿದ್ದರು. ಸಮ್ಮೇಳನದ ಕಾರ್ಯಕ್ರಮಗಳ ನೇರ ಪ್ರಸಾರ ಹಾಗೂ ವರದಿಗಾಗಿ ಬಂದಿದ್ದ ಅವರು, ತಮ್ಮ 31 ಸಿಬ್ಬಂದಿಗಳಿಗೆ ವಸತಿ ಮತ್ತು ಕಾರ್ಯಕ್ರಮಗಳ ಪ್ರಸಾರಕ್ಕೆ 65/35 ಕೆವಿಎ ಡಿಸೇಲ್ ಜನರೇಟರ್ ಅನ್ನು ಪರಿಷತ್ತಿನಿಂದ ನೀಡಲಿಲ್ಲ, ಎಂಬ ಕಾರಣಕ್ಕಾಗಿ ಮಾಧ್ಯಮಗಳ ಎದುರು ಅಸಂಬದ್ಧವಾಗಿ ಮಾತನಾಡಿದ್ದರು.
ಜೊತೆಗೆ ‘ಮಧ್ಯದಲ್ಲಿಯೇ ಸಮ್ಮೇಳನದ ಪ್ರಸಾರವನ್ನು ಸ್ಥಗಿತಗೊಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದರು. ಅಲ್ಲದೆ, ಯಲಿಗಾರ್ ಅವರು ದೂರದರ್ಶನ ಕೇಂದ್ರದಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಒಂದು ನಿಮಿಷದ ಮೌನವನ್ನೂ ಆಚರಿಸಿರುತ್ತಾರೆ. ಈ ರೀತಿ ಮೌನಾಚರಣೆ ಮಾಡುವುದು ಯಾರಾದರು ಮೃತ ಹೊಂದಿದ ಸಂದರ್ಭದಲ್ಲಿ. ಕಸಾಪ ಮೃತ ಹೊಂದುವ ಸಂಸ್ಥೆಯಲ್ಲ. ಸೂರ್ಯ-ಚಂದ್ರರಿರುವವರೆಗೂ ಹಾಗೂ ಕನ್ನಡಿಗರು ಈ ಭೂಮಿಯಲ್ಲಿ ಇರುವವರೆಗೂ ಪರಿಷತ್ತು ಜೀವಂತವಾಗಿರುವ ಸಂಸ್ಥೆ ಎಂದು ಕಸಾಪ ತಿಳಿಸಿದೆ.
108 ವರ್ಷಗಳ ಇತಿಹಾಸ ಹೊಂದಿರುವ ಕಸಾಪ ಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಸಮಸ್ತ ಕನ್ನಡಿಗರು ಆಗ್ರಹ ಮಾಡಿದ್ದರು. ಜೊತೆಗೆ ಇಂತಹ ಕುಚೇಷ್ಟೆ ಮಾಡುವರ ವಿರುದ್ಧ ಪರಿಷತ್ತು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಕಸಾಪ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಪರಿಷತ್ತಿನ ಘನತೆ-ಗೌರವಗಳನ್ನು ಪಾಲಿಸದ ವ್ಯಕ್ತಿಗೆ ಪರಿಷತ್ತಿನ ದತ್ತಿ ಪ್ರಶಸ್ತಿ ನೀಡುವುದು ಸಮಂಜಸವಲ್ಲ. ಜೊತೆಗೆ ನಿರ್ಮಲಾ ಯಲಿಗಾರ್ರ ಈ ವರ್ತನೆ ದತ್ತಿ ನಿಧಿಯ ಆಶಯಗಳಿಗೂ, ದತ್ತಿ ದಾನಿಗಳ ಆಶಯಗಳಿಗೂ ವಿರುದ್ಧವಾಗಿರುವುದರಿಂದ, 2022ನೆ ಸಾಲಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗಾಗಿ ಯಲಿಗಾರ ಅವರ ಆಯ್ಕೆಯನ್ನು ರದ್ದುಗೊಳಿಸಲಾಗಿದೆ ಎಂದು ಪರಿಷತ್ತು ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.