ಧ್ರುವನಾರಾಯಣ್ ನಿಧನ ಹಿನ್ನೆಲೆ: ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಮನಗರ ತಾಲೂಕಿನ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಧ್ರುವ ನಾರಾಯಣ್ ಅವರ ನಿಧನದಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ಮುಂದೂಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸುದ್ದಿಗೋಷ್ಠಿ ಕೂಡ ರದ್ದು ಮಾಡಲಾಗಿದೆ.
ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ
Next Story