ಬಿಜೆಪಿ MLC ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ
ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ವಶಕ್ಕೆ
ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ವಶಕ್ಕೆ
ಹಾವೇರಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಗಳವಾರ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತಡರಾತ್ರಿವರೆಗೂ ಪರಿಶೀಲನೆ ಮುಂದುವರಿಸಿದ್ದರೆನ್ನಲಾಗಿದೆ.
ಶಂಕರ್ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟ ಹಾಗೂ ವಿದ್ಯಾರ್ಥಿಗಳಿಗೆ ತಂದಿರುವ ಸ್ಕೂಲ್ ಬ್ಯಾಗ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಭಿಮಾನಿಗಳ ಆಕ್ರೋಶ:
ಇನ್ನು ಆರ್.ಶಂಕರ್ ನಿವಾಸದ ಮೇಲೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಆಗಮಿಸಿದ ಮಾಜಿ ಸಚಿವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ; ಶಾಸಕ ಹಾಲಪ್ಪ ವಿರುದ್ಧ ಬಿಎಸ್ವೈಗೆ ಬಿಜೆಪಿ, ಸಂಘಪರಿವಾರದವರಿಂದ ದೂರು
Next Story