ಲಂಚ ಸ್ವೀಕರಿಸುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಅಧಿಕಾರಿ ಲೋಕಾಯಕ್ತ ಬಲೆಗೆ
ಮಂಡ್ಯ, ಮಾ.21: ಗೋದಾಮ ಬಾಡಿಗೆ ವಿಚಾರವಾಗಿ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಮಳವಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಭಾರ ಕಾರ್ಯದರ್ಶಿ ಕೆ.ಸಿ.ಸಾಕಮ್ಮ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕಿರುಗಾವಲು ಎಪಿಎಂಸಿ ಪ್ರಾಂಗಣದ ಗೋದಾಮು ಬಾಡಿಗೆ ನೀಡುವ ಸಂಬಂಧ ವರ್ತಕ ಆನಂದ್ ಎಂಬುವರಿಗೆ ಸಾಕಮ್ಮ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂಬಂಧ ಆನಂದ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.
ಮಂಗಳವಾರ ಮುಂಗಡವಾಗಿ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಾವಿತ್ರಮ್ಮ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ದಾಳಿಯಲ್ಲಿ ಲೋಕಾಯುಕ್ತ ಎಸ್ಪಿ ಪುಟ್ಟಮಾದಯ್ಯ, ಡಿವೈಎಸ್ಪಿ ಎಚ್.ಟಿ.ಸುನಿಲ್ಕುಮಾರ್, ವೃತ್ತ ನಿರೀಕ್ಷಕ ಮೋಹನ್ ರೆಡ್ಡಿ, ಪ್ರಕಾಶ್, ಬ್ಯಾಟರಾಯಗೌಡ, ಇತರ ಸಿಬ್ಬಂದಿ ಭಾಗವಹಿಸಿದ್ದರು.
Next Story