ಧರ್ಮ ರಕ್ಷಣೆಯ ಹೆಸರಲ್ಲಿ BJP ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ: ಸಿದ್ದರಾಮಯ್ಯ
''ಹತ್ಯೆಯ ಹೊಣೆಯನ್ನು ಗೃಹ ಸಚಿವರೇ ಹೊರಬೇಕು''
ಬೆಂಗಳೂರು: ''ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು'' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ರವಿವಾರ ಟ್ವೀಟ್ ಮಾಡಿರುವ ಅವರು, 'ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
''ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು'' ಎಂದು ಒತ್ತಾಯಿಸಿದ್ದಾರೆ.
''ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು'' ಎಂದು ಸಿದ್ದರಾಮ್ಯ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಕನಕಪುರ | ಪುನೀತ್ಕೆರೆಹಳ್ಳಿ ತಂಡದಿಂದ ವಾಹನ ತಡೆದು ದಾಂಧಲೆ: ಓರ್ವನ ಅನುಮಾನಾಸ್ಪದ ಸಾವು
ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು. 3/4#LawAndOrder
— Siddaramaiah (@siddaramaiah) April 2, 2023
ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ?
— Siddaramaiah (@siddaramaiah) April 2, 2023
ಮೊದಲು @JnanendraAraga ಅವರನ್ನು ಸಂಪುಟದಿಂದ ಕಿತ್ತು ಹಾಕಿ. 2/4#LawAndOrder