Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಹಿತಿ ನೀಡದ ಹಿನ್ನೆಲೆ: ಮಂಡ್ಯ ನಗರಸಭೆ...

ಮಾಹಿತಿ ನೀಡದ ಹಿನ್ನೆಲೆ: ಮಂಡ್ಯ ನಗರಸಭೆ ಅಭಿಯಂತರರಿಗೆ 15 ಸಾವಿರ ರೂ. ದಂಡ

7 April 2023 7:57 PM IST
share
ಮಾಹಿತಿ ನೀಡದ ಹಿನ್ನೆಲೆ: ಮಂಡ್ಯ ನಗರಸಭೆ ಅಭಿಯಂತರರಿಗೆ 15 ಸಾವಿರ ರೂ. ದಂಡ

ಮಂಡ್ಯ, ಎ.7: ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರೊಬ್ಬರು ಕೇಳಿದ ಮಾಹಿತಿ ನೀಡದ ಕಾರಣ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರೊಬ್ಬರಿಗೆ ಕರ್ನಾಟಕ ಮಾಹಿತಿ ಆಯೋಗ 15 ಸಾವಿರ ರೂ. ದಂಡ ವಿಧಿಸಿದೆ.

ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಅವರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1)ರನ್ವಯ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಕೆ.ಪಿ.ಮಂಜುನಾಥ್ ಅವರು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 

ಸದರಿ ರವಿಕುಮಾರ್ ಅವರಿಗೆ ವಿಧಿಸಿರುವ ದಂಡದ ಮೊತ್ತವನ್ನು ಅವರ ವೇತನದಿಂದ ಕಡಿತಗೊಳಿಸಿ ಸರಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮಾ ಮಾಡಿ, ಜಮಾ ಮಾಡಿದ ರಶೀದಿಯೊಂದಿಗೆ ವರದಿಯನ್ನು ತನ್ನ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರಿಗೆ ಆದೇಶಿಸಲಾಗಿದೆ.

ಪ್ರಕರಣದ ವಿವರ:

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 2019ರಿಂದ 2022ರ ಅವಧಿಯಲ್ಲಿ ಮ್ಯಾನ್‍ಹೋಲ್ ದುರಸ್ತಿ ಕಾಮಗಾರಿಗೆ ಸಂಬಂಧಿಸಿದ ವರ್ಕ್ ಆರ್ಡರ್ ಪ್ರತಿ, ಟೆಂಡರ್ ಪ್ರಕ್ರಿಯೆ ದಾಖಲೆ ಪ್ರತಿ, ಗುತ್ತಿಗೆದಾರರ ಮಾಹಿತಿ, ಗುತ್ತಿಗೆದಾರರಿಗೆ ಪಾವತಿಸಿದ ಹಣದ ಮಾಹಿತಿ, ಮ್ಯಾನ್‍ಹೋಲ್‍ಗಳ ಸಂಖ್ಯೆ ಮಾಹಿತಿ ಕೋರಿ ಶಿವರಾಮೇಗೌಡ ಎಂಬುವರು ನಗರಸಭೆ ಮಾಹಿತಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.

ಆದರೆ, ನಿಗದಿತ ಅವಧಿಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅರ್ಜಿದಾರ ಶಿವರಾಮೇಗೌಡ ಪ್ರಥಮ ಮೇಲ್ಮನವಿ ಪ್ರಾಧಿಕಾರಿಯಾದ ಪೌರಾಯುಕ್ತ ಮಂಜುನಾಥ್ ಆರ್. ಅವರಿಗೆ ಮೇಲ್ಮನಿ ಸಲ್ಲಿಸಿದ್ದರು. ಆದರೆ, ಅವರೂ ಕೂಡ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದರು.

ಕರ್ನಾಟಕ ಮಾಹಿತಿ ಆಯೋಗದ ಆದೇಶಕ್ಕೂ ಮನ್ನಣೆ ನೀಡದ ಹಿನ್ನೆಲೆಯಲ್ಲಿ ಆಯೋಗದ ಆಯುಕ್ತರು ಸದರಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

share
Next Story
X