Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷೇತರ ಅಭ್ಯರ್ಥಿಯಾಗಿ ಟವಲ್...

ಪಕ್ಷೇತರ ಅಭ್ಯರ್ಥಿಯಾಗಿ ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ವೈಎಸ್ ವಿ ದತ್ತ

9 April 2023 4:34 PM IST
share
ಪಕ್ಷೇತರ ಅಭ್ಯರ್ಥಿಯಾಗಿ ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ವೈಎಸ್ ವಿ ದತ್ತ

ಕಡೂರು,ಎ.9: ಕಾಂಗ್ರೆಸ್ ನಿಂದ ಟಿಕೆಟ್​ ವಂಚಿತರಾಗಿರುವ ಮಾಜಿ ಶಾಸಕ ವೈಎಸ್ ವಿ ದತ್ತ ಅವರು  ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರವಿವಾರ ಘೋಷಣೆ ಮಾಡಿದ್ದಾರೆ. 

ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಗೀತಾ ಮಂದಿರದಲ್ಲಿ ದತ್ತ ಅಭಿಮಾನಿಗಳು, ಅನುಯಾಯಿಗಳು ಮತ್ತು ಗೆಳೆಯರ ಬಳಗದ ವತಿಯಿಂದ ರವಿವಾರ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 'ಅಭಿಮಾನಿಗಳ ಅಭಿಪ್ರಾಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಟವಲ್ ಗುರುತಿನಿಂದ ಸ್ಪರ್ಧೆ ಮಾಡುತ್ತೇನೆ' ಎಂದು ಘೋಷಣೆ ಮಾಡಿದರು.

'ಜಾತಿ, ಹಣ ಬಲದ ರಾಜಕಾರಣ ಮೀರಿ ಪ್ರೀತಿ, ವಾತ್ಸಲ್ಯ ಮತ್ತು ಸ್ವಾಭಿಮಾನದ ರಾಜಕಾರಣಕ್ಕೆ ಇಡೀ ರಾಜ್ಯದಲ್ಲಿಯೇ ಮೊದಲ ಬಾರಿಗೆ ಓಂಕಾರ ಹಾಕಬಹುದಾದ ಅವಕಾಶ ಕಡೂರು ಕ್ಷೇತ್ರದ ಜನರಿಗೆ ಲಭಿಸಿದೆ. ಈ ಪರೀಕ್ಷೆಯಲ್ಲಿ ಜನರು ಯಶಸ್ಸು ಗಳಿಸುತ್ತಾರೆ' ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನಿರಾಕರಿಸಿದ ಬಗ್ಗೆ ಕೊಂಚವೂ ಬೇಸರವಿಲ್ಲ. ಆದರೆ ಆ ಪಕ್ಷದ ನಾಯಕರು ದತ್ತ ಅವರಿಗೆ ಜಾತಿ ಇಲ್ಲ, ಮೈತುಂಬಾ ಸಾಲ ಮಾಡಿಕೊಂಡಿದ್ದಾರೆ ಎಂದೆಲ್ಲಾ ಆರೋಪಿಸಿದ್ದಾರೆ. ಹಾಗೆ ಈ ದತ್ತ ನಡೆದುಕೊಂಡಿದ್ದರೆ ಇಂದು ಸಾವಿರಾರು ಜನ ಈ ಕಾರ್ಯಕ್ರಮಕ್ಕೆ ಬರುತ್ತಿದ್ದರೇ? ಎಂದು ಪ್ರಶ್ನೆ ಮಾಡಿದರು.
 
ಜಾತಿ, ಹಣ, ತೋಳ್ಬಲವೇ ಟಿಕೆಟ್ ಹಂಚಿಕೆಯ ಮಾನದಂಡ ಆಗುವುದಾದರೆ ತಮ್ಮಂತಹ ರಾಜಕಾರಣಿಗಳು ಶಾಸಕಗಿರಿಯ ಕನಸನ್ನು ಕಾಣಲೇಬಾರದು. ಕೇವಲ ಕ್ಷೇತ್ರದ ಎರಡು ಬಹು ಸಂಖ್ಯಾತ ಕೋಮಿನ ವ್ಯಕ್ತಿಗಳೇ ಶಾಸಕರಾಗಬೇಕೆಂಬ ಅಲಿಖಿತ ನಿಯಮ ಇರುವುದಾದರೆ ದುರ್ಬಲರು, ಜಾತಿಯ ಬಲವಿಲ್ಲದ ತಮ್ಮಂತಹ ರಾಜಕಾರಣಿಗಳ ಪಾಡೇನು ಎಂದು ಭಾವುಕರಾಗಿ ಪ್ರಶ್ನೆ ಮಾಡಿದರು. 

ಇದನ್ನೂ ಓದಿ: ಅಭ್ಯರ್ಥಿಗಳ 2ನೇ ಪಟ್ಟಿ: ವೈ.ಎಸ್.ವಿ ದತ್ತಾಗೆ ಕೈ ಕೊಟ್ಟ ಕಾಂಗ್ರೆಸ್

share
Next Story
X