ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿತ್ತು 1 ಕೋಟಿ ರೂ.!
ಮೈಸೂರು: ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಹೋದರ ಕೆ.ಸುಬ್ರಮಣ್ಯ ಅವರ ಮನೆ ಮೇಲೆ ದಾಳಿ ನಡೆಸಿ 1 ಕೋಟಿ ರೂ.ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸೋಮವಾರ ರಾತ್ರಿಯೇ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕೆ.ಸುಬ್ರಮಣ್ಯ ಅವರ ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಇವರ ಮನೆಯ ಮುಂಭಾಗದಲ್ಲಿ ಹಾಕಲಾಗಿದ್ದ ಅಲಂಕಾರಿಕ ಗಿಡದ ಒಳಗಡೆ ಬಚ್ಚಿಟ್ಟಿದ್ದ ಹಣ್ಣಿನ ಬಾಕ್ಸ್ ನಲ್ಲಿ ಇಡಲಾಗಿದ್ದ 1 ಕೋಟಿ. ರೂ.ಬಂಡಲ್ ಹಣವನ್ನು ವಶಪಡಿಸಿಕೊಂಡಿದ್ದಾರೆ. ಇಂದು ಸಹ ಅಧಿಕಾರಿಗಳು ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಿಂದ ಬಂದಿರುವ 20 ಅಧಿಕಾರಿಗಳ ತಂಡ ಮೈಸೂರಿನ ಹಲವಡೆ ದಾಳಿ ಮುಂದುವರಿಸಿದ್ದು, ಹಲವು ಅಂಗಡಿಗಳ ಮೇಲೂ ದಾಳಿ ನಡೆಸಿದ್ದಾರೆ. ಜೊತೆಗೆ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಉದ್ಯಮಿಗಳ ಮನೆ ಮೇಲು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
#IncomeTax raids happening at Puttur Congress candidate Ashok Rai's brother Subramanya Rai's house in #Mysuru. IT raids happening also at Bombay Tiffany's store. #KarnatakaElections2023 pic.twitter.com/I8AjJTFE8Q
— Imran Khan (@KeypadGuerilla) May 3, 2023