ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಚುನಾವಣಾ ಆಯೋಗ ನೋಟಿಸ್
ಬೆಂಗಳೂರು, ಮೇ 8: ಕಾಂಗ್ರೆಸ್ ಪಕ್ಷದ ವಿರುದ್ಧ ಪತ್ರಿಕೆಯೊಂದಕ್ಕೆ ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಭಾರತೀಯ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ಕಾರ್ಯದರ್ಶಿ ಬಿ.ಸಿ.ಪಾತ್ರ ನೋಟಿಸ್ ಜಾರಿಗೊಳಿಸಿದ್ದು, ಮೇ 9ರಂದು ರಾತ್ರಿ 8 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.
ಒಂದು ವೇಳೆ ನಿಗದಿತ ಅವಧಿಯೊಳಗೆ ನೋಟಿಸ್ ಗೆ ಉತ್ತರ ನೀಡದಿದ್ದಲ್ಲಿ ಚುನಾವಣಾ ಆಯೋಗ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ನೋಟಿಸ್ ನಲ್ಲಿ ಅವರು ತಿಳಿಸಿದ್ದಾರೆ.
Next Story