Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಡಗೇವಾರ್, ಚಕ್ರವರ್ತಿ ಸೂಲಿಬೆಲೆ,...

ಹೆಡಗೇವಾರ್, ಚಕ್ರವರ್ತಿ ಸೂಲಿಬೆಲೆ, ಸಾವರ್ಕರ್ ಪಠ್ಯ ವಾಪಸ್: ಸಚಿವ ಮಧು ಬಂಗಾರಪ್ಪ

'ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ'

15 Jun 2023 4:30 PM IST
share
ಹೆಡಗೇವಾರ್, ಚಕ್ರವರ್ತಿ ಸೂಲಿಬೆಲೆ, ಸಾವರ್ಕರ್ ಪಠ್ಯ ವಾಪಸ್: ಸಚಿವ ಮಧು ಬಂಗಾರಪ್ಪ
'ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ'

ಬೆಂಗಳೂರು, ಜೂ.15: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕೇಶವ್ ಬಲಿರಾಮ್ ಹೆಡಗೇವಾರ್, ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಕುರಿತಾದ ಪಠ್ಯ ತೆಗೆದು ಹಾಕಿದ್ದು, ಬದಲಾಗಿ ಸಾವಿತ್ರಿ ಬಾಯಿ ಫುಲೆ, ನೀ ಹೋದ ಮರು ದಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗೆಗಿನ ಕವಿತೆ. ಮಗಳಿಗೆ ಬರೆದ ಪತ್ರ ಎಂಬ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪಠ್ಯವನ್ನು ಸೇರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಪಠ್ಯಪುಸ್ತಕಗಳು ಆಯಾ ಶಾಲಾ ಮಕ್ಕಳಿಗೆ ತಲುಪಿವೆ. ಅಲ್ಲದೆ, ಇದಕ್ಕೆ ಈಗಾಗಲೇ ನೂರಾರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಹೀಗಾಗಿ ಮತ್ತೊಮ್ಮೆ ಪ್ರಿಂಟ್ ಮಾಡುವುದು ಕಷ್ಟ. ಪರಿಷ್ಕರಣೆ ವೇಳೆ ಮಕ್ಕಳಿಗೆ ಅವಶ್ಯಕತೆ ಇಲ್ಲದ ಹಾಗೂ ತಪ್ಪು ತಿಳುವಳಿಕೆ ಮೂಡಿಸುವ ವಿಚಾರಗಳನ್ನು ತೆಗೆಯಲಾಗಿದೆ. ಇದಕ್ಕಾಗಿ ಕೇವಲ 5 ಜನರ ಸಮಿತಿ ಮಾಡಲಾಗಿತ್ತು ಎಂದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರದ್ದು: ಸಚಿವ ಸಂಪುಟ ಸಭೆ ನಿರ್ಧಾರ

ಈ ಹಿಂದೆ ಇದ್ದ ಸಾವಿತ್ರಿ ಪುಲೆ ಅವರ ವಿಷಯವನ್ನು ತೆಗೆಯಲಾಗಿತ್ತು, ಅದನ್ನು ಮರಳಿ ಸೇರಿಸಲಾಗಿದೆ. ನೀ ಹೋದ ಮರು ದಿನ ಅಂಬೇಡ್ಕರ್ ಅವರ ಬಗೆಗಿನ ಕವಿತೆ, ಮಗಳಿಗೆ ಬರೆದ ಪತ್ರ ಎಂಬ ನೆಹರೂ ಅವರದ್ದನ್ನೂ ಸಹ ಮರಳಿ ಸೇರಿಲಾಗುತ್ತಿದೆ. ಹೆಡ್ಗೇವಾರ್, ಚಕ್ರವರ್ತಿ ಸೂಲಿಬೆಲೆ, ಸಾವರ್ಕರ್ ಕುರಿತಾದ ಪಠ್ಯ ತೆಗೆದು ಹಾಕಿದ್ದೇವೆ ಎಂದು ಅವರು ಉಲ್ಲೇಖಿಸಿದರು.

ಇನ್ನೂ, ಸಾಹಿತಿಗಳೆಲ್ಲ ಈ ಬಗ್ಗೆ ಹೇಳಿದಾಗ ಈ ಹಿಂದಿನ ಪಠ್ಯದಲ್ಲಿದ್ದ ವಿಚಾರಗಳ ಕುರಿತಂತೆ 45 ಬದಲಾವಣೆಗಳನ್ನು ಮಾಡಲು ಯೋಚಿಸಲಾಗಿತ್ತು. ಪದಗಳು, ವಾಕ್ಯಗಳ ಬದಲಾವಣೆ ಹಾಗೂ ಪಠ್ಯ ಬಗ್ಗೆ ಬದಲಾವಣೆ ಮಾಡುವ ಅಗತ್ಯವಿತ್ತು. ಹೀಗಾಗಿ ಈ ಬಾರಿ 6ರಿಂದ 10ನೆ ತರಗತಿಯವರೆಗೆ ಸಪ್ಲಿಮೆಂಟರಿ ಪುಸ್ತಕ ಕೊಡುವ ಬಗ್ಗೆ ಸಂಪುಟವು ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಒಂದು ಒಳ್ಳೆಯ ಸಮಿತಿ ರಚನೆ ಮಾಡುವಂತೆಯೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಅದರಂತೆ ಶೀಘ್ರದಲ್ಲಿಯೇ ಹೊಸ ಸಮಿತಿಯನ್ನು ರಚಿಸಿ ಮಕ್ಕಳ ಭವಿಷ್ಯಕ್ಕೆ ಉತ್ತಮವಾಗಿರುವ ಪಠ್ಯ ಮಾಡಲಾಗುವುದು ಎಂದು ಸಚಿವರು ನುಡಿದರು.

share
Next Story
X