ಶ್ರೀ ರಾಮೇಶ್ವರ ದೇವಾಲಯಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ
ತೀರ್ಥಹಳ್ಳ್ಳಿ,ಅ.17: ಮಾಜಿ ಪ್ರಧಾನಿ ಹಾಗೂ ರಾಷ್ಟ್ರೀಯ ಜನತಾದಳದ ಅಧ್ಯಕ್ಷ ಎಚ್.ಡಿ. ದೇವೇಗೌಡರು ಇಂದು ಇಲ್ಲಿನ ಪ್ರತಿಷ್ಠಿತ ಶ್ರೀ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ, ಪುನಸ್ಕಾರದಲ್ಲಿ ಪಾಲ್ಗೊಂಡಿದ್ದರು.
ಶ್ರೀ ರಾಮೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಂದು ರೈತರ ಸಮಸ್ಯೆ ಹೆಚ್ಚಾಗಿದ್ದು, ಆತ್ಮಹತ್ಯೆಗಳ ಸರಣಿ ನಿರಂತರವಾಗಿ ಮುಂದುವರಿಯುತ್ತಿದೆ. ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ರೈತರ ಸಮಸ್ಯೆಗಳು ಮನಗಂಡಂತಿಲ್ಲ. ರೈತರ ಸಮಸ್ಯೆ ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಪ್ರಯತ್ನ ಆಗುವುದಾದರೆ ಅದು ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್, ತಾ. ಜೆಡಿಎಸ್ ಅಧ್ಯಕ್ಷ ಆರ್.ಮದನ್, ತಾಲೂಕು ಜೆಡಿಎಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮುಂದು
Next Story