ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 30ಕ್ಕೂ ಹೆಚ್ಚು ಜನರ ಬಂಧನ
ಕಲಬುರಗಿ, ನ.1: ರಾಜ್ಯ ಸರಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನಿಸಿದ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಕಲಬುರಗಿ ನಗರದ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನಿಸಿದ್ದರು.
ಕೋರ್ಟ್ ರಸ್ತೆ ಮೂಲಕ ಪಟೇಲ್ ವೃತ್ತಕ್ಕೆ ಬರುತ್ತಿದ್ದಾಗಲೇ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
Next Story