ಸೇತುವೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ, ಜ. 3: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಡುಬಾ ಸೇತುವೆಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೇಳಿಗೆ ಗ್ರಾಮದ ಸದಾಶಿವ (42) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಅಂಗಡಿ ನಡೆಸುತ್ತಿದ್ದು, ಅದರಲ್ಲಿ ನಷ್ಟ ಹೊಂದಿದ್ದರಿಂದ ಮನನೊಂದು ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಎಂದು ಹೇಳಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story