'ಸಧ್ಯದಲ್ಲಿಯೇ ಯುವ ಕಾಂಗ್ರೆಸ್ ಸಮಾವೇಶ'
ಮಡಿಕೇರಿ, ಜೂ.18: ಕಾಂಗ್ರೆಸ್ ಪಕ್ಷದ ಬಲವರ್ಧನೆಯ ದೃಷ್ಟಿಯಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಯುವ ಘಟಕದ ಆಶ್ರಯದಲ್ಲಿ ಜಿಲ್ಲಾ ಸಮಾವೇಶವನ್ನು ಸಧ್ಯದಲ್ಲಿಯೇ ನಡೆಸಲಾಗುವುದೆಂದು ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾದ ಹನೀಫ್ ಸಂಪಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಡಾ.ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಅಭಿನಂಧಿಸಿದ ನಂತರ ಪಕ್ಷದ ಬಲವರ್ಧನೆಯ ಕುರಿತು ಚರ್ಚಿಸಿರುವುದಾಗಿ ಹನೀಫ್ ಸಂಪಾಜೆ ಹಾಗೂ ಶಾಫಿ ಕೊಟ್ಟಮುಡಿ ಹೇಳಿದ್ದಾರೆ.
ಯುವ ಕಾಂಗ್ರೆಸ್ ಘಟಕದಲ್ಲಿ ದಾಖಲೆ ಸಂಖ್ಯೆಯಲ್ಲಿ ಸದಸ್ಯತ್ವವನ್ನು ಹೊಂದುತ್ತಿದ್ದು, ಇದೊಂದು ಆಶಾದಾಯಕ ಬೆಳೆವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸಿಗರೇ ನಿರ್ಣಾಯಕವಾಗಲಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ನ ಬೆಳವಣಿಗೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರು ಪೂರಕ ಸ್ಪಂದನೆ ನೀಡಿದ್ದಾರೆ ಎಂದು ಹನೀಫ್ ಸಂಪಾಜೆ ಹಾಗೂ ಶಾಫಿ ಕೊಟ್ಟಮುಡಿ ಇದೇ ಸಂದರ್ಭ ತಿಳಿಸಿದ್ದಾರೆ.