Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯುದ್ಧದಲ್ಲಿ ಬದುಕುಳಿದ ನಿರಾಶ್ರಿತ ಈಗ...

ಯುದ್ಧದಲ್ಲಿ ಬದುಕುಳಿದ ನಿರಾಶ್ರಿತ ಈಗ ಕ್ರೊಯೇಶಿಯ ಫುಟ್ಬಾಲ್ ನಾಯಕ

ವಾರ್ತಾಭಾರತಿವಾರ್ತಾಭಾರತಿ14 July 2018 3:01 PM IST
share
ಯುದ್ಧದಲ್ಲಿ ಬದುಕುಳಿದ ನಿರಾಶ್ರಿತ ಈಗ ಕ್ರೊಯೇಶಿಯ ಫುಟ್ಬಾಲ್ ನಾಯಕ

  ಮಾಸ್ಕೊ, ಜು.14: ಕ್ರೊಯೇಶಿಯ ಯುದ್ದದಲ್ಲಿ ಬದುಕುಳಿದಿದ್ದ ನಿರಾಶ್ರಿತ ಲುಕಾ ಮೊಡ್ರಿಕ್ ಈಗ ಪ್ರತಿಷ್ಠಿತ ವಿಶ್ವಕಪ್ ಫೈನಲ್‌ನಲ್ಲಿ ಫುಟ್ಬಾಲ್ ತಂಡದ ನಾಯಕನಾಗಿದ್ದಾರೆ. ಕ್ರೊಯೇಶಿಯ ನಾಯಕ ತನ್ನ ಜೀವನದುದ್ದಕ್ಕೂ ಹೋರಾಟವನ್ನು ಮಾಡಿಕೊಂಡು ಬಂದಿದ್ದಾರೆ. ಮಿಡ್‌ಫೀಲ್ಡರ್ ಮೊಡ್ರಿಕ್ ಟೀಕಾಕಾರರ ಬಾಯಿ ಮುಚ್ಚಿಸಿದ್ದಲ್ಲದೆ, ಇದೀಗ ಮೊದಲ ಬಾರಿ ಫೈನಲ್‌ಗೆ ತಲುಪಿರುವ ಕ್ರೊಯೇಶಿಯ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.

ಯುದ್ದದ ಸಮಯದಲ್ಲಿ ಸರ್ಬಿಯ ಆಕ್ರಮಣಕಾರರಿಂದ ತಪ್ಪಿಸಿಕೊಂಡು ಕ್ರೊಯೇಶಿಯಕ್ಕೆ ನಿರಾಶ್ರಿತರಾಗಿ ಬಂದಿದ್ದ ಕುಟುಂಬದಲ್ಲಿ ಜನಿಸಿರುವ ಮೊಡ್ರಿಕ್ ತಾಯಿ ಜವಳಿ ಕಾರ್ಮಿಕರಾಗಿದ್ದರು. ತಂದೆ ಯುದ್ದದ ವೇಳೆ ಕ್ರೊಯೇಶಿಯ ಸೈನಿಕರ ಕಾರುಗಳ ರಿಪೇರಿ ಮಾಡುವ ಮೆಕಾನಿಕ್ ಆಗಿದ್ದರು. ಸರ್ಬಿಯ ಸೇನೆಯಿಂದ ಹತರಾದ ಅಜ್ಜ ಲುಕಾ ನೆನಪಿಗಾಗಿ ಮೊಡ್ರಿಕ್‌ಗೆ ಲುಕಾ ಮೊಡ್ರಿಕ್ ಎಂದು ಹೆಸರಿಡಲಾಗಿತ್ತು.

 ಮೊಡ್ರಿಡ್ ಕ್ರೊವೇಶಿಯಕ್ಕೆ ನಿರಾಶ್ರಿತರಾಗಿ ಬಂದಾಗ  ಆರು ವರ್ಷ ಬಾಲಕನಾಗಿದ್ದರು. ಯುದ್ದದ ಸಮಯದಲ್ಲಿ ಮೊಡ್ರಿಕ್ ಹಾಗೂ ಅವರ ಕುಟುಂಬ ಸದಸ್ಯರು ಝಾದರ್ ಪಟ್ಟಣದ ಹೊಟೇಲ್‌ವೊಂದರಲ್ಲಿ ವಾಸವಾಗಿದ್ದರು. ಬಾಲ್ಕನ್ ಯುದ್ಧ ಮುಂದುವರಿದ ಕಾರಣ ಮೊಡ್ರಿಕ್ ಚಿಕ್ಕಂದಿನಲ್ಲೇ ಗ್ರೆನೇಡ್ ಹಾಗೂ ಬುಲೆಟ್‌ಗಳ ಸದ್ದುಗಳ ನಡುವೆ ಬೆಳೆದಿದ್ದರು.

ಮೊಡ್ರಿಕ್ ವಾಸಿಸುತ್ತಿದ್ದ ಹೊಟೇಲ್‌ನಲ್ಲಿ ನೀರು ಹಾಗೂ ವಿದ್ಯುತ್ ಬೆಳಕಿರಲಿಲ್ಲ. ಮೊಡ್ರಿಕ್ ತಂದೆ ಮೆಕಾನಿಕ್ ಕೆಲಸವನ್ನು ಮುಂದುವರಿಸುತ್ತಾ ಮಗನಿಗೆ ಫುಟ್ಬಾಲ್ ಆಟಗಾರನಾಗಲು ಬೇಕಾದ ಸೌಲಭ್ಯ ಒದಗಿಸಿಕೊಟ್ಟಿದ್ದರು.

‘‘ಯುದ್ದ ಆರಂಭವಾದಾಗ ನಾವು ನಿರಾಶ್ರಿತರಾಗಿದ್ದೆವು. ಅದು ನಿಜವಾಗಿಯೂ ಕಠಿಣ ಸಮಯವಾಗಿತ್ತು. ಆಗ ನನಗೆ ಆರು ವರ್ಷವಾಗಿತ್ತು. ನನಗೆ ಯುದ್ಧದ ನೆನಪು ಸ್ಪಷ್ಟವಾಗಿದೆ. ನಾವು ಹೊಟೇಲ್‌ನಲ್ಲಿ ಬಹಳಷ್ಟು ಕಾಲ ನೆಲೆಸಿದ್ದೆವು. ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಿಸಿದ್ದೆವು. ಕಷ್ಟದ ನಡುವೆಯೂ ನಾನು ಫುಟ್ಬಾಲ್‌ನ್ನು ತುಂಬಾ ಇಷ್ಟಪಡುತ್ತಿದ್ದೆ. ನಾನು ಧರಿಸಿದ್ದ ಮೊದಲ ಪ್ಯಾಡ್‌ನಲ್ಲಿ ಬ್ರೆಝಿಲ್‌ನ ರೊನಾಲ್ಡಿನೊ ಚಿತ್ರವಿತ್ತು. ನಾನು ಅವರನ್ನು ತುಂಬಾ ಇಷ್ಟಪಡುತ್ತಿದ್ದೆ. ಯುದ್ದ ನನ್ನನ್ನು ಬಲಿಷ್ಠವಾಗಿಸಿತು. ಅದು ನನ್ನ ಹಾಗೂ ಕುಟುಂಬದವರಿಗೆ ತುಂಬಾ ನೋವು ನೀಡಿದೆ. ಅದನ್ನು ನೆನಪಿಸಿಕೊಳ್ಳಲು ಬಯಸುವುದಿಲ್ಲ’’ ಎಂದು ಮೊಡ್ರಿಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X