Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ವಿಟೋವಾ, ಹಾಲೆಪ್ ಕ್ವಾರ್ಟರ್‌ಫೈನಲ್‌ಗೆ...

ಕ್ವಿಟೋವಾ, ಹಾಲೆಪ್ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ

ದುಬೈ ಟೆನಿಸ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ21 Feb 2019 12:13 AM IST
share
ಕ್ವಿಟೋವಾ, ಹಾಲೆಪ್ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ

ದುಬೈ, ಫೆ.20: ಮಾಜಿ ಚಾಂಪಿಯನ್‌ಗಳಾದ ಪೆಟ್ರಾ ಕ್ವಿಟೋವಾ ಹಾಗೂ ಸಿಮೊನಾ ಹಾಲೆಪ್ ಮರುಭೂಮಿಯ ಬಿರುಗಾಳಿಯ ನಡುವೆಯೂ ಉತ್ತಮ ಪ್ರದರ್ಶನ ನೀಡಿ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ.

ಸ್ಪರ್ಧೆಯಲ್ಲಿರುವ ಗರಿಷ್ಠ ರ್ಯಾಂಕಿನ ಆಟಗಾರ್ತಿ, ದ್ವಿತೀಯ ಶ್ರೇಯಾಂಕದ ಕ್ವಿಟೋವಾ ಬುಧವಾರ ನಡೆದ ಮಹಿಳೆಯರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಅಮೆರಿಕದ ಕ್ವಾಲಿಫೈಯರ್ ಜೆನ್ನಿಫರ್ ಬ್ರಾಡಿ ಅವರನ್ನು 7-5, 1-6, 6-3 ಸೆಟ್‌ಗಳಿಂದ ಮಣಿಸಿದರು.

ಪ್ರೇಕ್ಷಕರ ಫೇವರಿಟ್ ಆಟಗಾರ್ತಿ ಹಾಗೂ ಮೂರನೇ ಶ್ರೇಯಾಂಕದ ಹಾಲೆಪ್ ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಉಕ್ರೇನ್‌ನ ಲೆಸಿಯಾ ಸುರೆಂಕೊರನ್ನು 6-3, 7-5 ಸೆಟ್‌ಗಳಿಂದ ಮಣಿಸಿದರು. ವಿಶ್ವದ ಮಾಜಿ ನಂ.1 ಆಟಗಾರ್ತಿ ರೊಮೇನಿಯದ ಹಾಲೆಪ್ ಸರಣಿಯಲ್ಲಿ ಏಳನೇ ಪಂದ್ಯ ಜಯಿಸಿ ಪ್ರಾಬಲ್ಯ ಮೆರೆದಿದ್ದಾರೆ.

ಸ್ಲೋವಾಕಿಯದ ವಿಕ್ಟೋರಿಯ ಕುರ್ಮೊವಾ ಅಮೆರಿಕದ ಸೋಫಿಯಾ ಕೆನಿನ್‌ರನ್ನು 1-6, 7-5, 6-2 ಅಂತರದಿಂದ ಮಣಿಸಿದರು. ಈ ಮೂಲಕ ಈ ಋತುವಿನಲ್ಲಿ ಎರಡನೇ ಬಾರಿ ಅಂತಿಮ-8ರ ಘಟ್ಟ ತಲುಪಿದ್ದಾರೆ.

2013ರಲ್ಲಿ ದುಬೈನಲ್ಲಿ ಟ್ರೋಫಿ ಜಯಿಸಿದ್ದ ಕ್ವಿಟೋವಾ, ‘‘ನಾನು ಇಲ್ಲಿಗೆ ಬಂದಾಗ ಹೆಚ್ಚು ದಿನ ಪ್ರಾಕ್ಟೀಸ್ ನಡೆಸಿರಲಿಲ್ಲ. ಟೂರ್ನಿಗೆ ಯಾವುದೆ ತಯಾರಿ ನಡೆಸಿರಲಿಲ್ಲ’’ ಎಂದು ಹೇಳಿದ್ದಾರೆ.

ಮೊದಲ ಸುತ್ತಿನಲ್ಲೇ ಹೊರಬಿದ್ದ ಒಸಾಕಾ

ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್‌ನ ಕ್ರಿಸ್ಟಿನಾ ಲಾಡೆನೊವಿಕ್ ವಿರುದ್ಧ 3-6, 3-6 ನೇರ ಸೆಟ್‌ಗಳಿಂದ ಆಘಾತ ಅನುಭವಿಸಿದ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಜಪಾನ್‌ನ ನವೊಮಿ ಒಸಾಕಾ, ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನಿಂದ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದಾರೆ.

ವಿಶ್ವ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿರುವ ಒಸಾಕಾ ಅಗ್ರಸ್ಥಾನದಲ್ಲಿರುವ ಒತ್ತಡವನ್ನು ನಿಭಾಯಿಸಲು ಪರದಾಡುತ್ತಿರುವುದಾಗಿ ಪಂದ್ಯದ ನಂತರ ಪ್ರತಿಕ್ರಿಯಿಸಿದರು. ಸುಮಾರು 1 ತಾಸಿನ ಅವಧಿಯಲ್ಲಿ ಮುಕ್ತಾಯವಾದ ಪಂದ್ಯದಲ್ಲಿ ಅವರು 25 ಅನಗತ್ಯ ತಪ್ಪುಗಳನ್ನು ಎಸಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X