Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಲ್ಲ ಮಾದರಿ ಕ್ರಿಕೆಟ್‌ಗೆ ವೇಣುಗೋಪಾಲ್...

ಎಲ್ಲ ಮಾದರಿ ಕ್ರಿಕೆಟ್‌ಗೆ ವೇಣುಗೋಪಾಲ್ ರಾವ್ ವಿದಾಯ

ವಾರ್ತಾಭಾರತಿವಾರ್ತಾಭಾರತಿ30 July 2019 11:20 PM IST
share
ಎಲ್ಲ ಮಾದರಿ ಕ್ರಿಕೆಟ್‌ಗೆ ವೇಣುಗೋಪಾಲ್ ರಾವ್ ವಿದಾಯ

ಹೈದರಾಬಾದ್, ಜು.30: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ವೇಣುಗೋಪಾಲ್ ರಾವ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ಮಂಗಳವಾರ ವಿದಾಯ ಘೋಷಿಸಿದ್ದಾರೆ.

37ರ ಹರೆಯದ ವಿಶಾಖಪಟ್ಟಣದ ಆಟಗಾರ ವೇಣುಗೋಪಾಲ್ ಭಾರತದ ಪರ 16 ಏಕದಿನ ಪಂದ್ಯಗಳಲ್ಲಿ 24.22 ಸರಾಸರಿಯಂತೆ 218 ರನ್ ಗಳಿಸಿದ್ದರು. 1 ಅರ್ಧಶತಕ ದಾಖಲಿಸಿದ್ದರು.

 ಆಂಧ್ರ ಪ್ರದೇಶ ರಣಜಿ ತಂಡದ ಮಾಜಿ ನಾಯಕ ವೇಣುಗೋಪಾಲ್ ರಾವ್ 121 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ, 40.93 ಸರಾಸರಿಯಂತೆ 7,081 ರನ್ ಗಳಿಸಿದ್ದಾರೆ. 17 ಶತಕ ಮತ್ತು 30 ಅರ್ಧಶತಕಗಳನ್ನು ದಾಖಲಿಸಿದ್ದಾರೆ.

2000ರಲ್ಲಿ ವಿಶ್ವಕಪ್ ಜಯಿಸಿದ ಭಾರತದ ಅಂಡರ್-19 ತಂಡದ ಸದಸ್ಯರಾಗಿದ್ದರು.

ವೇಣುಗೋಪಾಲ್ ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜರ್ಸ್‌, ಸನ್‌ರೈಸರ್ಸ್‌ ಹೈದರಾಬಾದ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ಪರ ಒಟ್ಟು 65 ಪಂದ್ಯಗಳಲ್ಲಿ ಆಡಿದ್ದರು.

 ಆಂಧ್ರ ಪ್ರದೇಶದಿಂದ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದ ಎರಡನೇ ಆಟಗಾರ ವೇಣುಗೋಪಾಲ್. ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಆಂಧ್ರದ ಪರ ಮೊದಲ ಬಾರಿ ಟೀಮ್ ಇಂಡಿಯಾದ ಪರ ಆಡುವ ಅವಕಾಶ ಪಡೆದ ಮೊದಲ ಆಟಗಾರ ಎನಿಸಿಕೊಂಡಿದ್ದರು.

ವೇಣುಗೋಪಾಲ್ ರಣಜಿಯಲ್ಲಿ ರಾಜಸ್ಥಾನ ಮತ್ತು ಗುಜರಾತ್ ತಂಡವನ್ನು ಕೂಡಾ ಪ್ರತಿನಿಧಿಸಿದ್ದರು.

ದೇವಧರ್ ಟ್ರೋಫಿ, ವಿಜಯ್ ಹಝಾರೆ ಮತ್ತು ಚಾಲೆಂಜರ್ ಟ್ರೋಫಿಯಲ್ಲಿ ವೇಣುಗೋಪಾಲ್ ಉತ್ತಮ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್ ‘ಎ’ ವಿರುದ್ಧ ದಕ್ಷಿಣ ವಲಯ ಪರ ಆಡಿದ್ದ ವೇಣುಗೋಪಾಲ್ ಸ್ಮರಣಿಯ ದ್ವಿಶತಕ(ಔಟಾಗದೆ 228 ) ದಾಖಲಿಸಿದ್ದರು.

 14 ವರ್ಷಗಳ ಹಿಂದೆ (ಜು.30, 2005) ಶ್ರೀಲಂಕಾ ವಿರುದ್ಧ ಚೊಚ್ಚಲ ಏಕದಿನ ಪಂದ್ಯವನ್ನಾಡಿದ್ದರು. ಮಧ್ಯಮ ಸರದಿಯ ಬ್ಯಾಟ್ಸ್‌ಮನ್ ವೇಣುಗೋಪಾಲ್ ಅರೆಕಾಲಿಕ ಬೌಲರ್ ಆಗಿದ್ದರು. ತೆಲುಗಿನಲ್ಲಿ ವೀಕ್ಷಕ ವಿವರಣೆಗಾರನಾಗಿಯೂ ಗಮನ ಸೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X