ದೀಪಕ್ ಚಹಾರ್ ಅಲಭ್ಯ
ಮೂರನೇ ಏಕದಿನ
ಕಟಕ್, ಡಿ.19: ಭಾರತದ ವೇಗದ ಬೌಲರ್ ದೀಪಕ್ ಚಹಾರ್ ಬೆನ್ನುನೋವಿನಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ನಿರ್ಣಾಯಕ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಚಹಾರ್ ಬದಲಿಗೆ ನವದೀಪ್ ಸೈನಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
3 ಪಂದ್ಯಗಳ ಸರಣಿಯು ಇದೀಗ 1-1ರಿಂದ ಸಮಬಲಗೊಂಡಿದ್ದು, ಅಂತಿಮ ಪಂದ್ಯ ರವಿವಾರ ನಡೆಯಲಿದೆ. ‘‘ವಿಝಾಗ್ನಲ್ಲಿ ಬುಧವಾರ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ದೀಪಕ್ಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಬಿಸಿಸಿಐ ವೈದ್ಯಕೀಯ ತಂಡ ಚಹಾರ್ ತಪಾಸಣೆ ನಡೆಸಿದ್ದು, ವೇಗದ ಬೌಲರ್ಗೆ ಸಂಪೂರ್ಣ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಅವರು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ’’ ಎಂದು ಬಿಸಿಸಿಐ ಪ್ರಕಟನೆಯೊಂದರಲ್ಲಿ ತಿಳಿಸಿದೆ.
Next Story