Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್...

ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್ ಬಾಗಿಲು ಬಂದ್?

ವಾರ್ತಾಭಾರತಿವಾರ್ತಾಭಾರತಿ1 Sept 2020 12:12 AM IST
share
ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್ ಬಾಗಿಲು ಬಂದ್?

ಹೊಸದಿಲ್ಲಿ: ವೈಯಕ್ತಿಕ ಕಾರಣದಿಂದಾಗಿ ಈ ಋತುವಿನ ಐಪಿಎಲ್ ಟೂರ್ನಿಯಿಂದ ಹೊರ ನಡೆದಿರುವ ಆಲ್‌ರೌಂಡರ್ ಸುರೇಶ್ ರೈನಾ ಅವರ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ)ನೊಂದಿಗಿನ ದೀರ್ಘ ಬಾಂಧವ್ಯ ಅಂತ್ಯದತ್ತ ಸಾಗಿದ್ದು, 2021ರ ಆವೃತ್ತಿಯ ಮೊದಲೇ ಚೆನ್ನೈ ಫ್ರಾಂಚೈಸಿಯು ರೈನಾರಿಂದ ಪ್ರತ್ಯೇಕವಾಗುವ ನಿರೀಕ್ಷೆಯಿದೆ.

ದುಬೈನಲ್ಲಿರುವ ಚೆನ್ನೈ ಫ್ರಾಂಚೈಸಿಯ ದೀಪಕ್ ಚಹಾರ್ ಹಾಗೂ ಋತುರಾಜ್ ಗಾಯಕ್ವಾಡ್ ಸಹಿತ 13 ಮಂದಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಕ್ವಾರಂಟೈನ್ ಅವಧಿಯಲ್ಲಿ 32ರ ಹರೆಯದ ರೈನಾ ಅವರ ನಡವಳಿಕೆಯು ಟೀಮ್ ಮ್ಯಾನೇಜ್‌ಮೆಂಟ್‌ನ ಅಸಮಾಧಾನಕ್ಕೆ ಕಾರಣವಾಗಿದೆ.

 ಸಿಎಸ್‌ಕೆ ನಿಯಮಗಳ ಪ್ರಕಾರ ಕೋಚ್, ನಾಯಕ ಹಾಗೂ ಮ್ಯಾನೇಜರ್ ಕೊಠಡಿಗಳನ್ನು ಪಡೆಯುತ್ತಾರೆ. ಆದಾಗ್ಯೂ, ರೈನಾ ಅವರು ಫ್ರಾಂಚೈಸಿ ನೆಲೆಸುವ ಎಲ್ಲ ಹೊಟೇಲ್‌ಗಳಲ್ಲೂ ಕೊಠಡಿ ಪಡೆದಿದ್ದರು. ಅವರ ರೂಮ್‌ನಲ್ಲಿ ಬಾಲ್ಕನಿ ಇಲ್ಲದಿರುವುದೇ ಇದಕ್ಕೆ ಕಾರಣವಾಗಿತ್ತು. ಇದೊಂದು ಸಮಸ್ಯೆಯಾಗಿದ್ದರೂ ಭಾರತಕ್ಕೆ ವಾಪಸ್ ಆಗುವಷ್ಟು ದೊಡ್ಡದಲ್ಲ ಎಂದು ಐಪಿಎಲ್ ಮೂಲಗಳು ಪಿಟಿಐಗೆ ತಿಳಿಸಿವೆ.

ರೈನಾ ಈ ಋತುವಿನಲ್ಲಿ ಲಭ್ಯವಿರುವುದಿಲ್ಲ ಎನ್ನುವುದು ಸಿಎಸ್‌ಕೆ ಪ್ರಕಟಿಸಿರುವ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟವಾಗಿದೆ. ಈಗ ಕೆಲವು ವಿಚಾರಗಳು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳಿಗೆ ಹಿಡಿಸುತ್ತಿಲ್ಲ. ನಿವೃತ್ತಿಯಾಗಿರುವ ಹಾಗೂ ಯಾವುದೇ ಕ್ರಿಕೆಟ್ ಆಡದಿರುವ ಆಟಗಾರ ಚೆನ್ನೈ ತಂಡಕ್ಕೆ ಮತ್ತೆ ವಾಪಸಾಗುವ ಸಾಧ್ಯತೆ ಇಲ್ಲ. ಬಹುಶಃ ಅವರು ಹರಾಜಿನಲ್ಲಿ ಹಿಂತಿರುಗುತ್ತಾರೆ ಅಥವಾ ಬೇರೆ ಫ್ರಾಂಚೈಸಿ ಅವರನ್ನು ಆಯ್ಕೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ರೈನಾರಿಂದ ತೆರವಾಗಿರುವ ಸ್ಥಾನಕ್ಕೆ ಅಧಿಕೃತ ಬದಲಿ ಆಟಗಾರರನ್ನು ಸಿಎಸ್‌ಕೆ ಇನ್ನೂ ಕೇಳಿಲ್ಲ. ಆ ಕುರಿತು ಇನ್ನೂ ನಿರ್ಧರಿಸಿಲ್ಲ. ಸಿಎಸ್‌ಕೆ ಯುವ ಆಟಗಾರ ಋತುರಾಜ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು, ಅವರು ಕ್ವಾರಂಟೈನ್ ಅವಧಿ ಮುಗಿಸಿದ ಬಳಿಕ ಎರಡು ನೆಗೆಟಿವ್ ಪರೀಕ್ಷೆಯ ನಂತರ ತರಬೇತಿ ಶಿಬಿರಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 164 ಐಪಿಎಲ್ ಪಂದ್ಯಗಳಲ್ಲಿ ಆಡಿರುವ ರೈನಾ 4,527 ರನ್ ಕಲೆ ಹಾಕಿ ಚೆನ್ನೈ ತಂಡದ ಗರಿಷ್ಠ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಉತ್ತರಪ್ರದೇಶದ ಎಡಗೈ ಬ್ಯಾಟ್ಸ್‌ಮನ್ ರೈನಾ ಐಪಿಎಲ್ ಇತಿಹಾಸದಲ್ಲಿ ಎರಡನೇ ಗರಿಷ್ಠ ಸ್ಕೋರರ್(5,368 ರನ್)ಆಗಿದ್ದಾರೆ. ಭಾರತದ ನಾಯಕ ವಿರಾಟ್ ಕೊಹ್ಲಿ(5,412)ಐಪಿಎಲ್‌ನಲ್ಲಿ ಹೆಚ್ಚು ರನ್ ಗಳಿಸಿರುವ ದಾಖಲೆ ನಿರ್ಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X