Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉದಯೋನ್ಮುಖ ಕ್ರಿಕೆಟಿಗನ...

ಉದಯೋನ್ಮುಖ ಕ್ರಿಕೆಟಿಗನ ಶಸ್ತ್ರಚಿಕಿತ್ಸೆಗೆ 31 ಲಕ್ಷ ರೂ.ನೆರವು ನೀಡಿದ ಕೆ.ಎಲ್. ರಾಹುಲ್

ವಾರ್ತಾಭಾರತಿವಾರ್ತಾಭಾರತಿ22 Feb 2022 9:33 PM IST
share
ಉದಯೋನ್ಮುಖ ಕ್ರಿಕೆಟಿಗನ ಶಸ್ತ್ರಚಿಕಿತ್ಸೆಗೆ 31 ಲಕ್ಷ ರೂ.ನೆರವು ನೀಡಿದ ಕೆ.ಎಲ್. ರಾಹುಲ್

 ಬೆಂಗಳೂರು, ಫೆ. 22: ಅಪರೂಪದ ರಕ್ತದ ಕಾಯಿಲೆಗೆ ಚಿಕಿತ್ಸೆ ನೀಡಲು ತುರ್ತು ಅಸ್ಥಿ ಮಜ್ಜೆಯ ಕಸಿ(ಬಿಎಂಟಿ)ಅಗತ್ಯವಿರುವ 11 ವರ್ಷದ ಉದಯೋನ್ಮುಖ ಕ್ರಿಕೆಟಿಗನಿಗೆ 31 ಲಕ್ಷ ರೂ. ನೆರವು ನೀಡಿರುವ ಭಾರತದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಮಾನವೀಯತೆ ಮೆರೆದಿದ್ದಾರೆ.

ಮುಂಬೈ ಶಾಲಾ ಬಾಲಕ, ಭಾರತ ಕ್ರಿಕೆಟ್ ಜರ್ಸಿಯನ್ನು ಧರಿಸಲು ಬಯಸಿರುವ ವರದ್ ಸೆಪ್ಟಂಬರ್ 2021ರಿಂದ ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ರಕ್ತ ತಜ್ಞರ ಆರೈಕೆಯಲ್ಲಿದ್ದಾನೆ. ವರದ್ ಅವರ ಪೋಷಕರಾದ ವಿಮಾ ಏಜೆಂಟ್ ಸಚಿನ್ ನಲವಡೆ ಹಾಗೂ ಗೃಹಿಣಿ ಸ್ವಪ್ನಾ ಅವರು ತಮ್ಮ ಮಗನ ಚಿಕಿತ್ಸೆಗಾಗಿ ಪಾವತಿಸಲು ಅಗತ್ಯವಿರುವ 35 ಲಕ್ಷ ರೂ. ಸಂಗ್ರಹಿಸಲು ಗಿವ್ ಇಂಡಿಯಾದಲ್ಲಿ ನಿಧಿ ಸಂಗ್ರಹ ಅಭಿಯಾನ ಆರಂಭಿಸಿದರು.
ವರದ್ ಕುರಿತು ತಿಳಿದ ತಕ್ಷಣ ರಾಹುಲ್ ತಂಡವು ಗಿವ್ ಇಂಡಿಯಾದ ಸಂಪರ್ಕಕ್ಕೆ ಬಂದಿದೆ. ಚಿಕಿತ್ಸೆಗೆ ಅಗತ್ಯವಿರುವ 35 ಲಕ್ಷ ರೂ. ಪೈಕಿ 31 ಲಕ್ಷ ರೂ. ದೇಣಿಗೆ ನೀಡಲು ರಾಹುಲ್ ಮುಂದಾದರು.ವರದ್‌ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

‘‘ವರದ್ ಅವರ ಸ್ಥಿತಿಯ ಬಗ್ಗೆ ನನಗೆ ತಿಳಿದಾಗ ನನ್ನ ತಂಡವು ಗಿವ್ ಇಂಡಿಯಾದೊಂದಿಗೆ ಸಂಪರ್ಕದಲ್ಲಿತ್ತು. ಇದರಿಂದ ನಾವು ಅವರಿಗೆ ಸಹಾಯ ಮಾಡಲು ಸಾಧ್ಯವಾಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದಕ್ಕೆ ನನಗೆ ಖುಷಿಯಾಗಿದೆ. ಅವರು ಬೇಗನೆ ಚೇತರಿಸಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳಲಿ. ನನ್ನ ಕೊಡುಗೆಯು ಹೆಚ್ಚು ಹೆಚ್ಚು ಜನರು ಮುಂದೆ ಬರಲು ಹಾಗೂ ಅಗತ್ಯವಿರುವವರಿಗೆ ಸಹಾಯ ಮಾಡಲು ಪ್ರೇರೇಪಿಸುತ್ತದೆ ಎಂದು ನಾನು ಭಾವಿಸುತ್ತೇನೆ’’ ಎಂದು ರಾಹುಲ್ ಹೇಳಿಕೆಯೊಂದರಲ್ಲಿ ತಿಳಿಸಿದರು.

ಐದನೇ ತರಗತಿಯ ಶಾಲಾ ಬಾಲಕ ವರದ್‌ಗೆ ಸೆಪ್ಟಂಬರ್ 2021ರಲ್ಲಿ ಅಪರೂಪದ ರಕ್ತದ ಕಾಯಿಲೆ ಕಂಡುಬಂದ ಬಳಿಕ ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವರದ್ ಅವರ ರಕ್ತದ ಪ್ಲೇಟ್‌ಲೆಟ್ ಮಟ್ಟ ತುಂಬಾ ಕಡಿಮೆಯಾಗಿದ್ದು, ರೋಗ ನಿರೋಧಕ ಶಕ್ತಿ ಕುಂದಿತ್ತು. ಸಾಮಾನ್ಯ ಜ್ವರ ಗುಣಮುಖವಾಗಲು ತಿಂಗಳುಗಟ್ಟಲೆ ಹಿಡಿಯುತ್ತಿತ್ತು. ವರದ್ ಅವರ ಸ್ಥಿತಿಗೆ ಅಸ್ಥಿಮಜ್ಜೆಯ ಕಸಿ ಮಾತ್ರ ಶಾಶ್ವತ ಚಿಕಿತ್ಸೆಯಾಗಿತ್ತು.

ಮಧ್ಯಮ ವರ್ಗದ ಕುಟುಂಬವು ಹಣದ ಕೊರತೆಯನ್ನು ಎದುರಿಸಿತು. ವರದ್ ಅವರ ತಂದೆ ಮಗನ ಕ್ರಿಕೆಟಿನಾಗುವ ಕನಸು ಜೀವಂತವಾಗಿಡಲು ತೆಗೆದಿಟ್ಟಿದ ಹಣವನ್ನು ಖರ್ಚು ಮಾಡಿದರು. ‘‘ವರದ್ ಶಸ್ತ್ರಚಿಕಿತ್ಸೆಗೆ ಇಷ್ಟು ದೊಡ್ಡ ಮೊತ್ತವನ್ನು ದೇಣಿಗೆ ನೀಡಿರುವ ಕೆ.ಎಲ್.ರಾಹುಲ್ ಅವರಿಗೆ ನಾವು ಕೃತಜ್ಞರಾಗಿರುತ್ತೇವೆ. ಅವರು ನೀಡಿದ ಸಹಾಯದಿಂದ ಕಡಿಮೆ ಅವಧಿಯಲ್ಲಿ ಅಸ್ಥಿಮಜ್ಜೆಯ ಕಸಿ ಮಾಡಲು ಸಾಧ್ಯವಾಯಿತು’’ ಎಂದು ವರದ ಅವರ ತಾಯಿ ಸ್ವಪ್ನಾ ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X