ಪೆಟ್ರೋಲ್ ಗಾಗಿ ಸಾಲು ನಿಂತವರಿಗೆ ಸ್ವತಃ ಚಾ-ತಿಂಡಿ ವಿತರಿಸುವ ಫೋಟೊ ಪ್ರಕಟಿಸಿದ ಶ್ರೀಲಂಕಾ ಮಾಜಿ ಕ್ರಿಕೆಟಿಗ

Photo: Twitter/Rosh_maha
ಹೊಸದಿಲ್ಲಿ: ಶ್ರೀಲಂಕಾವು ಆಹಾರ, ಇಂಧನ, ಔಷಧಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿರುವಾಗ ಮಾಜಿ ಕ್ರಿಕೆಟಿಗ ರೋಷನ್ ಮಹಾನಾಮ ಅವರು ಕೊಲಂಬೊದ ಪೆಟ್ರೋಲ್ ಬಂಕ್ನಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿರುವವರಿಗೆ ಚಹಾ ಮತ್ತು ಬನ್ ವಿತರಿಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಶ್ರೀಲಂಕಾ ಸ್ವಾತಂತ್ರ್ಯದ ನಂತರದ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದ್ದು, ದೇಶವು ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
“ವಾರ್ಡ್ ಪ್ಲೇಸ್ ಮತ್ತು ವಿಜೆರಾಮ ಮಾವತಾ ಸುತ್ತಮುತ್ತಲಿನ ಪೆಟ್ರೋಲ್ ಸರತಿಯಲ್ಲಿದ್ದ ಜನರಿಗೆ ನಾವು ಸಮುದಾಯ ಊಟದ ತಂಡದೊಂದಿಗೆ ಟೀ ಮತ್ತು ಬನ್ಗಳನ್ನು ಇಂದು ಸಂಜೆ ವಿತರಿಸಿದೆವು. ಸರತಿ ಸಾಲುಗಳು ದಿನದಿಂದ ದಿನಕ್ಕೆ ಉದ್ದವಾಗುತ್ತಿವೆ ಮತ್ತು ಸರತಿಯಲ್ಲಿ ಉಳಿಯುವ ಜನರಿಗೆ ಅನೇಕ ಆರೋಗ್ಯ ಅಪಾಯಗಳಿವೆ" ಎಂದು ಕ್ರಿಕೆಟಿಗ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂಧನ ಕೇಂದ್ರಗಳ ಕಾವಲು ಕಾಯಲು ಶ್ರೀಲಂಕಾ ಸಶಸ್ತ್ರ ಪೋಲೀಸ್ ಮತ್ತು ಪಡೆಗಳನ್ನು ನಿಯೋಜಿಸಿದೆ. ಶ್ರೀಲಂಕಾದಲ್ಲಿ ಪ್ರಯಾಣವನ್ನು ಕಡಿಮೆ ಮಾಡಲು ಮತ್ತು ಖಾಲಿಯಾಗುತ್ತಿರುವ ಇಂಧನ ದಾಸ್ತಾನುಗಳನ್ನು ಸಂರಕ್ಷಿಸುವ ಪ್ರಯತ್ನದಲ್ಲಿ ಸರ್ಕಾರವು ಎರಡು ವಾರಗಳ ಕಾಲ ರಾಜ್ಯ ಸಂಸ್ಥೆಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಘೋಷಿಸಿದೆ.
"ದಯವಿಟ್ಟು, ಇಂಧನ ಸರತಿ ಸಾಲಿನಲ್ಲಿ ಒಬ್ಬರನ್ನೊಬ್ಬರು ನೋಡಿಕೊಳ್ಳಿ. ಸಾಕಷ್ಟು ಕುಡಿಯುವ ನೀರು ಮತ್ತು ಆಹಾರವನ್ನು ತನ್ನಿ. ನಿಮ್ಮ ಆರೋಗ್ಯ ಸರಿ ಇಲ್ಲದಿದ್ದರೆ ದಯವಿಟ್ಟು ನಿಮ್ಮ ಪಕ್ಕದಲ್ಲಿರುವ ವ್ಯಕ್ತಿಗೆ ಈ ವಿಚಾರವನ್ನು ತಿಳಿಸಿ ಮತ್ತು ಸಹಾಯ ಮಾಡುವಂತೆ ಕೇಳಿ ಅಥವಾ 1990 ಗೆ ಕರೆ ಮಾಡಿ. ಈ ಕಷ್ಟದ ಸಮಯದಲ್ಲಿ ನಾವು ಒಬ್ಬರನ್ನೊಬ್ಬರು ಆರೈಕೆ ಮಾಡಬೇಕು," ಕ್ರಿಕೆಟಿಗ ರೋಶನ್ ಮಹಾನಾಮ ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
We served tea and buns with the team from Community Meal Share this evening for the people at the petrol queues around Ward Place and Wijerama mawatha.
— Roshan Mahanama (@Rosh_Maha) June 18, 2022
The queues are getting longer by the day and there will be many health risks to people staying in queues. pic.twitter.com/i0sdr2xptI
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.