Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರೀಡಾ ಜಗತ್ತಿಗೆ ಸಂಬಂಧಿಸಿದ ಅತ್ಯಂತ...

ಕ್ರೀಡಾ ಜಗತ್ತಿಗೆ ಸಂಬಂಧಿಸಿದ ಅತ್ಯಂತ ಸುಂದರ ಚಿತ್ರ: ಫೆಡರರ್‌-ನಡಾಲ್‌ ಭಾವುಕ ಚಿತ್ರಕ್ಕೆ ಕೊಹ್ಲಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ24 Sept 2022 4:56 PM IST
share
ಕ್ರೀಡಾ ಜಗತ್ತಿಗೆ ಸಂಬಂಧಿಸಿದ ಅತ್ಯಂತ ಸುಂದರ ಚಿತ್ರ: ಫೆಡರರ್‌-ನಡಾಲ್‌ ಭಾವುಕ ಚಿತ್ರಕ್ಕೆ ಕೊಹ್ಲಿ ಪ್ರತಿಕ್ರಿಯೆ

ಹೊಸದಿಲ್ಲಿ: ತಮ್ಮ ಪ್ರತಿಸ್ಪರ್ಧಿ ರೋಜರ್ ಫೆಡರರ್ ಜೊತೆಗೆ ಅಳುತ್ತಿರುವ ರಫೆಲ್ ನಡಾಲ್ ಚಿತ್ರವನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ, "ತಾನು ನೋಡಿದ ಅತ್ಯಂತ ಸುಂದರವಾದ ಕ್ರೀಡಾ ಚಿತ್ರ" ಎಂದು ಹೇಳಿದ್ದಾರೆ. ಲಂಡನ್‌ನಲ್ಲಿನ ಲೇವರ್ ಕಪ್‌ನಲ್ಲಿ ತನ್ನ ವೃತ್ತಿಜೀವನದ ಅಂತಿಮ ಪಂದ್ಯದಲ್ಲಿ ಫೆಡರರ್ ತನ್ನ ಪ್ರತಿಸ್ಪರ್ಧಿ ನಡಾಲ್ ರೊಂದಿಗೆ ಆಡಿದ್ದಾರೆ. 

ಸಾರ್ವಕಾಲಿಕ ಶ್ರೇಷ್ಠ ಟೆನಿಸ್‌ ಕ್ರೀಡಾಪಟುಗಳಲ್ಲಿ ಒಬ್ಬರಾದ ರೋಜರ್ ಫೆಡರರ್ ಶುಕ್ರವಾರ ತಮ್ಮ ಟೆನಿಸ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದು, ಲೇವರ್ ಕಪ್ ಡಬಲ್ಸ್ ಈವೆಂಟ್‌ನಲ್ಲಿ ದೀರ್ಘಾವಧಿಯ ಪ್ರತಿಸ್ಪರ್ಧಿ ರಫೆಲ್ ನಡಾಲ್ ಅವರೊಂದಿಗೆ ಜೋಡಿಯಾಗಿ ವಿಶಿಷ್ಟವಾದ ರೀತಿಯಲ್ಲಿ ತಮ್ಮ ವೃತ್ತಿಜೀವನದ ಕೊನೆಯ ಆಟವನ್ನು ಆಡಿದ್ದಾರೆ.

ಈ ಸಂದರ್ಭದಲ್ಲಿ ಫೆಡರರ್ ಅವರು ಆಟಕ್ಕೆ ವಿದಾಯ ಹೇಳುವಾಗ ಭಾವುಕರಾಗಿದ್ದರು, ಲೇವರ್ ಕಪ್ ಪಂದ್ಯದ ನಂತರ ಫೆಡರರ್‌ ಜೊತೆಗೆ ರಫೆಲ್ ನಡಾಲ್ ಕೂಡ ಅತ್ತಿದ್ದಾರೆ. ದೀರ್ಘಕಾಲದಿಂದ ಪ್ರತಿಸ್ಪರ್ಧಿಗಳಾದ ಇವರಿಬ್ಬರ ಈ ಕ್ರೀಡಾ ಸ್ಪೂರ್ತಿ ಕಂಡು ಕ್ರೀಡಾಭಿಮಾನಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸದ್ದಾರೆ. ಕ್ರಿಕೆಟರ್‌ ವಿರಾಟ್‌ ಕೂಡಾ ಇದಕ್ಕೆ ಹೊರತಲ್ಲ. ಇಬ್ಬರೂ ಒಟ್ಟಿಗೆ ಅಳುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕೊಹ್ಲಿ, 'ಇದು ತನಗೆ ಅತ್ಯಂತ ಸುಂದರವಾದ ಕ್ರೀಡಾ ಚಿತ್ರ' ಎಂದು ವಿವರಿಸಿದ್ದಾರೆ.

"ಪ್ರತಿಸ್ಪರ್ಧಿಗಳು ಒಬ್ಬರಿಗೊಬ್ಬರು ಈ ರೀತಿ ಇರಬಹುದು ಎಂದು ಯಾರು ಭಾವಿಸಿದ್ದರು(?). ಇದು ಕ್ರೀಡೆಯ ಸೌಂದರ್ಯ. ನನಗೆ ಇದು ಕ್ರೀಡಾ ಜಗತ್ತಿಗೆ ಸಂಬಂಧಿಸಿದ ಅತ್ಯಂತ ಸುಂದರವಾದ ಚಿತ್ರವಾಗಿದೆ. ನಿಮ್ಮ ಸಂಗಾತಿಗಳು ನಿಮಗಾಗಿ ಕಣ್ಣೀರು ಸುರಿಸಿದಾಗ, ನಿಮಗೆ ದೇವರು ನೀಡಿದ ಪ್ರತಿಭೆಯಿಂದ ನೀವು ಏನು ಮಾಡಲು ಸಾಧ್ಯವಾಯಿತು ಎಂದು ನಿಮಗೆ ತಿಳಿಯತ್ತದೆ. ಈ ಇಬ್ಬರಿಗೆ ಗೌರವ ಹೊರತು ಬೇರೇನೂ ಇಲ್ಲ" ಎಂದು ಕೊಹ್ಲಿ ಬರೆದಿದ್ದಾರೆ. ಕೊಹ್ಲಿ ಪೋಸ್ಟಿಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಇಬ್ಬರು ಕ್ರೀಡಾ ಪಟುಗಳ ನಡುವಿನ ಅದ್ಭುತ ಬಾಂಧವ್ಯದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. 

ನಡಾಲ್ ಮತ್ತು ಫೆಡರರ್ ಇಬ್ಬರೇ 42 ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಫೆಡರರ್ 20ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದ ನಂತರ ತನ್ನ ಅದ್ಭುತ ವೃತ್ತಿಜೀವನಕ್ಕೆ ತೆರೆ ಎಳೆದರೆ, ನಡಾಲ್ ಪುರುಷರ ಟೆನಿಸ್ ಇತಿಹಾಸದಲ್ಲಿ 22 ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಹೊಂದಿರುವ ಅತ್ಯಂತ ಯಶಸ್ವಿ ಆಟಗಾರರಾಗಿ ಉಳಿದಿದ್ದಾರೆ.

Who thought rivals can feel like this towards each other. That’s the beauty of sport. This is the most beautiful sporting picture ever for me. When your companions cry for you, you know why you’ve been able to do with your god given talent.Nothing but respect for these 2. pic.twitter.com/X2VRbaP0A0

— Virat Kohli (@imVkohli) September 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X