‘ಖೇಲ್ ರತ್ನ’ ಪ್ರಶಸ್ತಿ ಸ್ವೀಕರಿಸಿದ ಶರತ್ ಕಮಲ್
-

ಹೊಸದಿಲ್ಲಿ, ನ. 30: ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ಗೆ ಬುಧವಾರ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಈ ವರ್ಷ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅವರು ಮೂರು ಚಿನ್ನದ ಪದಕಗಳು ಮತ್ತು ಒಂದು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಮಣಿಕಾ ಬಾತ್ರಾ ಬಳಿಕ, ಖೇಲ್ ರತ್ನ ಪ್ರಶಸ್ತಿ ಪಡೆದ ಎರಡನೇ ಟೇಬಲ್ ಟೆನಿಸ್ ಆಟಗಾರ ಅವರಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖೇಲ್ ರತ್ನ, ಅರ್ಜುನ ಪ್ರಶಸ್ತಿ ಸೇರಿದಂತೆ ವಿವಿಧ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ವಿತರಿಸಿದರು.
ಹಾಕಿ ದಂತಕತೆ ಮೇಜರ್ ಧ್ಯಾನಚಂದ್ರ ಜನ್ಮದಿನದ ಸಂದರ್ಭದಲ್ಲಿ ಪ್ರತಿ ವರ್ಷ ಆಗಸ್ಟ್ 29ರಂದು ಈ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗುತ್ತಿತ್ತು. ಆದರೆ, ಕಳೆದ ವರ್ಷ ಮತ್ತು ಈ ವರ್ಷ ಬೇರೆ ದಿನ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಕಿವಿಗಡಚಿಕ್ಕುವ ಕರತಾಡನದ ನಡುವೆ ಶರತ್ ಕಮಲ್ ರಾಷ್ಟ್ರಪತಿಯವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು.
ಖೇಲ್ ರತ್ನ ಪ್ರಶಸ್ತಿಯು 25 ಲಕ್ಷ ರೂ. ನಗದು, ಒಂದು
ಪದಕ ಮತ್ತು ಮಾನಪತ್ರವನ್ನು ಒಳಗೊಂಡಿದೆ. ಅರ್ಜುನ
ಪ್ರಶಸ್ತಿಯು 15 ಲಕ್ಷ ರೂ. ನಗದು, ಒಂದು ಕಂಚಿನ ಪುತ್ಥಳಿ ಮತ್ತು ಒಂದು ಮಾನಪತ್ರವನ್ನು ಒಳಗೊಂಡಿದೆ.
ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖತ್ ಝರೀನ್ ಮತ್ತು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಸೇರಿದಂತೆ 25 ಕ್ರೀಡಾಪಟುಗಳಿಗೆ ಈ ಬಾರಿ ಅರ್ಜುನ ಪ್ರಶಸ್ತಿಗಳನ್ನು ನೀಡಲಾಗಿದೆ.
ಖೇಲ್ ರತ್ನ ಪ್ರಶಸ್ತಿ ವಿತರಣೆಯ ಬಳಿಕ, ರಾಷ್ಟ್ರಪತಿಯವರು ಜೀವಮಾನದ ಸಾಧನೆಗಾಗಿ ಕ್ರೀಡಾಪಟುಗಳ ಕೋಚ್ಗಳಿಗೆ ನೀಡುವ ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಿದರು. ಈ ಬಾರಿಯ ‘ಜೀವಮಾನ ಸಾಧನೆ ದ್ರೋಣಾಚಾರ್ಯ ಪ್ರಶಸ್ತಿ’ಯನ್ನು ಕ್ರಿಕೆಟಿಗ ರೋಹಿತ್ ಶರ್ಮರ ಕೋಚ್ ದಿನೇಶ್ ಜವಾಹರ್ ಲಾಡ್, ಫುಟ್ಬಾಲ್ ಕೋಚ್ ಬಿಮಲ್ ಪ್ರಫುಲ್ಲ ಘೋಷ್ ಮತ್ತು ಕುಸ್ತಿ ಕೋಚ್ ರಾಜ್ ಸಿಂಗ್ ಅವರಿಗೆ ನೀಡಲಾಗಿದೆ.
ಸಾಮಾನ್ಯ ದ್ರೋಣಾಚಾರ್ಯ ಪ್ರಶಸ್ತಿಯನ್ನು ಜೀವನ್ಜೋತ್ ಸಿಂಗ್ ತೇಜ (ಬಿಲ್ಲುಗಾರಿಕೆ), ಮುಹಮ್ಮದ್ ಅಲಿ ಖಮರ್ (ಬಾಕ್ಸಿಂಗ್), ಸುಮಾ ಸಿದ್ಧಾರ್ಥ ಶಿರೂರ್ (ಪ್ಯಾರಾ ಶೂಟಿಂಗ್) ಮತ್ತು ಸುಜೀತ್ ಮಾನ್ (ಕುಸ್ತಿ) ಅವರಿಗೆ ನೀಡಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.