ರಾಜಸ್ಥಾನ: ಗ್ಯಾಂಗ್ ವಾರ್ ನಲ್ಲಿ ಇಬ್ಬರ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ
ಸಿಕಾರ್: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಗ್ಯಾಂಗ್ಸ್ಟರ್ ರಾಜು ಥೇಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ಗ್ಯಾಂಗ್ ವಾರ್ ಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವಿವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇಬ್ಬರು ಗಾಯಗೊಂಡ ಬಳಿಕ ಎನ್ಕೌಂಟರ್ ನಂತರ ಅವರನ್ನು ಹಿಡಿಯಲಾಯಿತು.
ವಾಂಟೆಡ್ ಗ್ಯಾಂಗ್ ಸ್ಟರ್ ರಾಜು ಥೇಟ್ ಜೊತೆಗೆ ತಾರಾಚಂದ್ ಕಡ್ವಾಸರ ಎಂದು ಗುರುತಿಸಲ್ಪಟ್ಟ ವ್ಯಕ್ತಿ, ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಓದುತ್ತಿರುವ ತನ್ನ ಮಗಳನ್ನು ಭೇಟಿಯಾಗಲು ಹೋಗಿದ್ದ ಸಂದರ್ಭ ಗುಂಡು ತಗಲಿ ಸಾವನ್ನಪ್ಪಿದ್ದಾರೆ. ಆರೋಪಿಗಳು ಥೇಟ್ ಅವರ ಆಪ್ತ ಎಂದು ಭಾವಿಸಿ ತಾರಾಚಂದ್ ಮೇಲೆ ಗುಂಡು ಹಾರಿಸಿದ್ದಾರೆ.
ತಾರಾಚಂದ್ ಕಡ್ವಾಸರ ಕಾರಿನ ಕೀ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Next Story