Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೊನಾಲ್ಡೊ ಸಾರ್ವಕಾಲಿಕ ಶ್ರೇಷ್ಠ ಆಟಗಾರ:...

ರೊನಾಲ್ಡೊ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಪೋರ್ಚುಗಲ್ ತಾರೆಯನ್ನು ಕೊಂಡಾಡಿದ ವಿರಾಟ್ ಕೊಹ್ಲಿ

12 Dec 2022 3:22 PM IST
share
ರೊನಾಲ್ಡೊ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಪೋರ್ಚುಗಲ್ ತಾರೆಯನ್ನು ಕೊಂಡಾಡಿದ ವಿರಾಟ್ ಕೊಹ್ಲಿ

ಹೊಸ ದಿಲ್ಲಿ: ಮೊರೊಕ್ಕೊ ತಂಡದ ಎದುರು ಸೋಲುಂಡು ಫೀಫಾ ವಿಶ್ವಕಪ್ 2022ರಿಂದ ಪೋರ್ಚುಗಲ್ ತಂಡ ಹೊರಬಿದ್ದಿರುವ ಬೆನ್ನಿಗೇ ಆ ತಂಡದ ಸಾರ್ವಕಾಲಿಕ ವಿಶ್ವ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ. ಪೋರ್ಚುಗಲ್ ತಂಡಕ್ಕೆ ತಾನು ಮತ್ತೆ ಆಡುತ್ತೇನೋ ಇಲ್ಲವೊ ಎಂಬುದನ್ನು ಖಚಿತಪಡಿಸದ ರೊನಾಲ್ಡೊ, ಆ ಕುರಿತ ಊಹಾಪೋಹಗಳಿಗೆ ಬಾಗಿಲನ್ನು ಮುಕ್ತವಾಗಿರಿಸಿದ್ದಾರೆ. ಈ ನಡುವೆ ರೊನಾಲ್ಡೊರ ದೊಡ್ಡ ಅಭಿಮಾನಿಯಾದ ಕ್ರಿಕಟಿಗ ವಿರಾಟ್ ಕೊಹ್ಲಿ (Virat Kohli), ರೊನಾಲ್ಡೊ ಬಗ್ಗೆ ಹೃದಯದುಂಬಿ ಮಾತನಾಡಿದ್ದು, ಐದು ಬಾರಿಯ ಬ್ಯಾಲನ್ ಡಿ’ಓರ್ ಪ್ರಶಸ್ತಿ ವಿಜೇತರಾದ ಅವರಿಗೆ ಸುಂದರವಾದ ಪೋಸ್ಟ್ ಮೂಲಕ ಗೌರವ ಸೂಚಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನೀವು ಫುಟ್‌ಬಾಲ್‌ ಹಾಗೂ ವಿಶ್ವಾದ್ಯಂತ ಇರುವ ಕ್ರೀಡಾಭಿಮಾನಿಗಳಿಗೆ ನೀಡಿರುವ ಕೊಡುಗೆ ಎದುರು ಯಾವುದೇ ಪಂದ್ಯಾವಳಿ ಅಥವಾ ಪ್ರಶಸ್ತಿ ನಿಮ್ಮಿಂದ ಏನನ್ನೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನೀವು ಜನರ ಮೇಲೆ ಮಾಡಿರುವ ಮೋಡಿಯನ್ನು ಯಾವ ಪ್ರಶಸ್ತಿಗಳಿಂದಲೂ ವಿವರಿಸಲು ಸಾಧ್ಯವಿಲ್ಲ. ನಾನೂ ಸೇರಿದಂತೆ ವಿಶ್ವಾದ್ಯಂತ ಇರುವ ಹಲವಾರು ಮಂದಿ ನಿಮ್ಮ ಆಟವನ್ನು ವೀಕ್ಷಿಸುವಾಗ ದೇವರ ಕೊಡುಗೆ ಎಂದೇ ಭಾವಿಸಿದ್ದೇವೆ" ಎಂದು ಬರೆದುಕೊಂಡಿದ್ದಾರೆ.

"ಪ್ರತಿ ಬಾರಿಯೂ ಹೃದಯಪೂರ್ವಕವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಯಾವುದೇ ವ್ಯಕ್ತಿಗೆ ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ನೈಜ ಸ್ಫೂರ್ತಿಗಳು ವರವೇ ಆಗಿವೆ. ನೀವು ನನ್ನ ಪಾಲಿಗೆ ಸಾರ್ವಕಾಲಿಕ ಶ್ರೇಷ್ಠ ಆಟಗಾರ" ಎಂದು ಕೊಂಡಾಡಿದ್ದಾರೆ.

ಖತರ್ ವಿಶ್ವಕಪ್‌ನಿಂದ ಪೋರ್ಚುಗಲ್ ತಂಡ ಹೊರಬಿದ್ದಿರುವುದರಿಂದ ನನ್ನ ಕನಸು ಅಂತ್ಯಗೊಂಡಿದೆ ಎಂದು ರವಿವಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

"ಪೋರ್ಚುಗಲ್ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದು ನನ್ನ ವೃತ್ತಿ ಜೀವನದಲ್ಲಿನ ಬಹುದೊಡ್ಡ ಮತ್ತು ಮಹತ್ವಾಕಾಂಕ್ಷಿ ಕನಸಾಗಿತ್ತು. ಅದೃಷ್ಟವಶಾತ್, ಪೋರ್ಚುಗಲ್ ಒಳಗೊಂಡಂತೆ ಹಲವಾರು ತಂಡಗಳಿಗೆ ನಾನು ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆಲ್ಲಿಸಿಕೊಟ್ಟಿದ್ದೇನೆ" ಎಂದು ಹೇಳಿದ್ದಾರೆ.

ಪೊರ್ಚುಗಲ್ ತಂಡ ಭಾಗಿಯಾಗಿದ್ದ ಅಂತಿಮ ಎರಡು ಪಂದ್ಯಗಳಾದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್ ಎದುರು ಹಾಗೂ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ ಎದುರು ರೊನಾಲ್ಡೊ 11ರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ಇದೀಗ ಅವರು ತಮ್ಮ ಹಣೆಬರಹವನ್ನು ಸಮಯದ ನಿರ್ಧಾರಕ್ಕೆ ಬಿಟ್ಟಿದ್ದು, ಉತ್ತಮ ಸಮಾಲೋಚಕರನ್ನು ಪಡೆಯುವ ಆಶಾವಾದದಲ್ಲಿದ್ದಾರೆ.

(2/2) A real blessing to a man who plays his heart out every single time and is the epitome of hard work and dedication and a true inspiration for any sportsperson. You are for me the greatest of all time. @Cristiano

— Virat Kohli (@imVkohli) December 12, 2022
share
Next Story
X