ಕಿವೀಸ್ ವಿರುದ್ಧ ಭಾರತಕ್ಕೆ 90 ರನ್ ಜಯ; ಸರಣಿ 3-0 ಅಂತರದಿಂದ ಕೈವಶ
-

Photo:twitter
ಇಂದೋರ್, ಜ.24: ರೋಹಿತ್ ಶರ್ಮಾ, ಶುಭಮನ್ ಗಿಲ್ ಶತಕ, ಶಾರ್ದೂಲ್ ಠಾಕೂರ್(3-45), ಕುಲದೀಪ್ ಯಾದವ್(3-62) ಹಾಗೂ ಯಜುವೇಂದ್ರ ಚಹಾಲ್(2-43) ಕರಾರುವಾಕ್ ಬೌಲಿಂಗ್ ನೆರವಿನಿಂದ ನ್ಯೂಝಿಲ್ಯಾಂಡ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಭಾರತವು 90 ರನ್ನಿಂದ ಗೆದ್ದುಕೊಂಡಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಜಯಿಸಿ ಕ್ಲೀನ್ಸ್ವೀಪ್ ಮಾಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಗೆಲ್ಲಲು 386 ರನ್ ಗುರಿ ಬೆನ್ನಟ್ಟಿದ ಕಿವೀಸ್ ತಂಡ 41.2 ಓವರ್ಗಳಲ್ಲಿ 295 ರನ್ಗೆ ಆಲೌಟಾಯಿತು. ಕಿವೀಸ್ ಪರ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೇ(138 ರನ್, 100 ಎಸೆತ, 12 ಬೌಂಡರಿ, 8 ಸಿಕ್ಸರ್)ಹಾಗೂ ಹೆನ್ರಿ ನಿಕೊಲ್ಸ್(42 ರನ್, 40 ಎಸೆತ)2ನೇ ವಿಕೆಟಿಗೆ 106 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ ಈ ಇಬ್ಬರು ಬೇರ್ಪಟ್ಟ ಬಳಿಕ ಕುಸಿತದ ಹಾದಿ ಹಿಡಿತ ಕಿವೀಸ್ 295 ರನ್ಗೆ ಆಲೌಟಾಯಿತು.
ಮಿಚೆಲ್ ಸ್ಯಾಂಟ್ನರ್(34 ರನ್), ಮೈಕಲ್ ಬ್ರೆಸ್ವೆಲ್ (26 ರನ್), ಡರ್ಲ್ ಮಿಚೆಲ್(24)ಎರಡಂಕೆಯ ಸ್ಕೋರ್ ಗಳಿಸಿದರು.
ರೋಹಿತ್, ಶುಭಮನ್ ಶತಕ, ಭಾರತ 385/9: ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ಗೆ ಆಹ್ವಾನಿಸಲ್ಪಟ್ಟ ಭಾರತ ಕ್ರಿಕೆಟ್ ತಂಡ ಶುಭಮನ್ ಗಿಲ್(112 ರನ್, 78 ಎಸೆತ)ಹಾಗೂ ರೋಹಿತ್ ಶರ್ಮಾ(101 ರನ್, 85 ಎಸೆತ)ಶತಕ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ(54 ರನ್, 38 ಎಸೆತ)ಅರ್ಧಶತಕದ ಸಹಾಯದಿಂದ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.