Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್‌ ಗೇಮ್ಸ್‌ಗೆ ಅರ್ಹತೆ ಪಡೆದ...

ಏಷ್ಯನ್‌ ಗೇಮ್ಸ್‌ಗೆ ಅರ್ಹತೆ ಪಡೆದ ನಿಖಾತ್ ಝರೀನ್‌, ಲೊವ್ಲಿನಾ

26 March 2023 8:12 AM IST
share
ಏಷ್ಯನ್‌ ಗೇಮ್ಸ್‌ಗೆ ಅರ್ಹತೆ ಪಡೆದ ನಿಖಾತ್ ಝರೀನ್‌, ಲೊವ್ಲಿನಾ

ಹೊಸದಿಲ್ಲಿ: ಭಾರತದ ಸ್ಟಾರ್ ಬಾಕ್ಸರ್‌ಗಳಾದ ನಿಖಾತ್ ಝರೀನ್ ಮತ್ತು ಲೊವ್ಲಿನಾ ಬೊರ್ಗೊಹೇನ್ ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಭಾರತದ ಹೈ ಪರ್ಫಾರ್ಮೆನ್ಸ್ ಡೈರೆಕ್ಟರ್ (ಎಚ್‌ಪಿಡಿ) ಬರ್ನಾರ್ಡ್ ಡ್ಯೂನ್ ಶನಿವಾರ ದೃಢಪಡಿಸಿದ್ದಾರೆ. ಏಷ್ಯನ್ ಗೇಮ್ಸ್ 2024ರ ಪ್ಯಾರೀಸ್ ಒಲಿಂಪಿಕ್ಸ್‌ಗೆ ಮೊದಲ ಅರ್ಹತಾ ಸುತ್ತು ಕೂಡಾ ಆಗಿರುತ್ತದೆ.

ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8ರವರೆಗೆ ಚೀನಾದ ಹಂಗ್ಸೋವ್ ನಗರದಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಆಯ್ಕೆ ಮಾಡುವ ಸಂಬಂಧ ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ (ಬಿಎಫ್‌ಐ) ನೀತಿಯ ಅನ್ವಯ, "ವಿಶ್ವಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನ/ ಬೆಳ್ಳಿ ಪದಕ ಗೆದ್ದವರು ಏಷ್ಯನ್ ಗೇಮ್ಸ್‌ನಲ್ಲಿ ಮೊದಲ ಒಲಿಂಪಿಕ್ಸ್ ಅರ್ಹತಾ ಸುತ್ತಿಗೆ ನೇರವಾಗಿ ಆಯ್ಕೆಯಾಗುತ್ತಾರೆ"

ಅಂದರೆ ಲೈಟ್‌ಫ್ಲೈವೈಟ್ ವಿಭಾಗದಲ್ಲಿ ನಿಖತ್ (50 ಕೆಜಿ) ಮತ್ತು ಮಿಡ್ಲ್‌ವೈಟ್ ವಿಭಾಗದಲ್ಲಿ ಲೊವಿನಾ (75 ಕೆಜಿ) ಈಗಾಗಲೇ ವಿಶ್ವಚಾಂಪಿಯನ್‌ಶಿಪ್ ಫೈನಲ್ ತಲುಪಿದ್ದು, ಈ ಕೂಟಕ್ಕೆ ಅರ್ಹತೆ ಸಂಪಾದಿಸಿದ್ದಾರೆ. ಇಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದವರು ಸಹಜವಾಗಿಯೇ ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗುತ್ತಾರೆ ಎಂದು ಡ್ಯೂನ್ ಸ್ಪಷ್ಟಪಡಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ 51, 57, 60, 69 ಹಾಗೂ 75 ಕೆಜಿ ಹೀಗೆ ಐದು ವಿಭಾಗಗಳಲ್ಲಿ ಭಾರತೀಯ ಬಾಕ್ಸರ್‌ಗಳು ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಈ ಐದು ವರ್ಗಗಳ ಜತೆಗೆ 66 ಕೆಜಿ ವಿಭಾಗವೂ ಇರುತ್ತದೆ.

ಅಂದರೆ ಕನಿಷ್ಠ ತೂಕ (48 ಕೆ.ಜಿ) ವಿಭಾಗದ ವಿಶ್ವಚಾಂಪಿಯನ್ ನೀತು ಘಾಂಘಾಸ್ ಮತ್ತು ಈಗಾಗಲೇ ಫೈನಲ್ ತಲುಪಿರುವ ಸವೀಟಿ ಬೋರಾ (81 ಕೆಜಿ) ಸ್ಟ್ಯಾಂಡ್‌ಬೈ ಬಾಕ್ಸರ್‌ಗಳಾಗಿರುತ್ತಾರೆ. ಅವರು ಒಲಿಂಪಿಕ್ ತೂಕ ವರ್ಗಕ್ಕೆ ಬದಲಾಗುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.

ತಮ್ಮ ತೂಕ ವರ್ಗ ಬದಲಿಸಿಕೊಳ್ಳುವವರು ಎರಡನೇ ಹಾಗೂ ಮೂರನೇ ಸ್ಥಾನದಲ್ಲಿರುತ್ತಾರೆ. ಅರ್ಹತೆ ಪಡೆದ ಬಾಕ್ಸರ್‌ಗಳಿಗೆ ಏನಾದರೂ ಆದಲ್ಲಿ, ಉಳಿದವರನ್ನು ಪರಿಗಣಿಸಲಾಗುತ್ತದೆ ಎಂದು ಡ್ಯೂನ್ ಸ್ಪಷ್ಟಪಡಿಸಿದರು.

share
Next Story
X