ಮಾ.15 ರಂದು ಬಿಜೆಪಿಗೆ ಎಸ್ಎಂ ಕೃಷ್ಣ ಸೇರ್ಪಡೆ
ಮೈಸೂರು, ಮಾ.13: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಾ.15 ರಂದು ಬಿಜೆಪಿಗೆ ಸೇರ್ಪೆಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೋಮವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.
‘‘ಕಾಂಗ್ರೆಸ್ಗೆ ಗುಡ್ ಬೈ ಹೇಳಿರುವ ಎಸ್ಎಂ ಕೃಷ್ಣ ಹೊಸದಿಲ್ಲಿಯಲ್ಲಿ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ’’ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
‘‘ಮುಂಬರುವ ನಂಜನಗೂಡು ಉಪ ಚುನಾವಣೆೆಯಲ್ಲಿ ಕಾಂಗ್ರೆಸ್ನ ಕಳಲೆ ಕೇಶವಮೂರ್ತಿ, ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ನಡುವೆ ನೇರ ಸ್ಪರ್ಧೆಯಿದೆ . ನಂಜನಗೂಡಿನಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಹತಾಶೆಯಲ್ಲಿ ಸಿಎಂ ಹಾಗೂ ಸಿಎಂ ಇಬ್ರಾಹಿಂರಂತಹವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ’’ಎಂದು ಯಡಿಯೂರಪ್ಪ ಹೇಳಿದ್ದಾರೆ.
Next Story