ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
ಉಡುಪಿ, ಜೂ.28: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಅಹ್ವಾನಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಗೆ ತಲುಪುವಂತೆ ಕಳುಹಿಸಲು ಜುಲೈ 5 ಕೊನೆಯ ದಿನವಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಅಥವಾ -www.kasapa.in- ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story