50ಶೇ. ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸದ ಮಹಾರಾಷ್ಟ್ರ ಪೊಲೀಸ್: ಸಮೀಕ್ಷೆ
-
ಮುಂಬೈ, ಡಿ.9: ಮಹಾರಾಷ್ಟ್ರದ ಪೊಲೀಸ್ ಠಾಣೆಗಳಲ್ಲಿ ಶೇಕಡಾ 50 ಅಪರಾಧ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲಾಗುವುದೇ ಇಲ್ಲ ಎಂಬ ಆಘಾತಕಾರಿ ಅಂಶ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ಅಪರಾಧವನ್ನು ಕ್ಷುಲ್ಲಕಗೊಳಿಸುವ ಅಥವಾ ಎಫ್ಐಆರ್ ದಾಖಲಿಸಲು ನಿರಾಕರಿಸುವ ಪ್ರಕರಣಗಳು ಮಹಾರಾಷ್ಟ್ರ ಪೊಲೀಸ್ ಠಾಣೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ ಎಂಬ ಅಂಶವನ್ನು ಈ ಸಮೀಕ್ಷೆ ಬಯಲು ಮಾಡಿದೆ.
ಕಳೆದ ಮೇ ತಿಂಗಳಲ್ಲಿ ಮಹಿಳೆಯೊಬ್ಬರು ನಾಸಿಕ್ ಗ್ರಾಮೀಣ ಪೊಲೀಸ್ ಠಾಣೆಗೆ ಅತ್ಯಾಚಾರ ದೂರು ದಾಖಲಿಸಲು ಆಗಮಿಸಿದ್ದರು. ಆದರೆ ಆಕೆಯ ಪ್ರಕರಣವನ್ನು ಪೊಲೀಸರು ಕೇವಲ ಲೈಂಗಿಕ ಶೋಷಣೆ ಎಂದು ದಾಖಲಿಸಿದ್ದರು. ಇದಾದ ಮೂರು ತಿಂಗಳ ನಂತರ ವಿಧಿವಿಜ್ಞಾನ ಇಲಾಖೆಯು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಿದ ನಂತರ ದೂರನ್ನು ತಿರುಚಿ ಅತ್ಯಾಚಾರವೆಂದು ಬದಲಿಸಲಾಗಿತ್ತು.
ಈ ಘಟನೆಯಿಂದ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್ ಇಲಾಖೆ ಆಂತರಿಕ ಸಮೀಕ್ಷೆ ನಡೆಸಲು ಮುಂದಾದಾಗ ಬೆಚ್ಚಿಬೀಳಿಸುವಂತಹ ವಿಷಯಗಳು ಬೆಳಕಿಗೆ ಬಂದಿದೆ. ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಶೇಕಡಾ 50 ಅಪರಾಧ ಪ್ರಕರಣಗಳನ್ನು ಕ್ಷುಲ್ಲಕಗೊಳಿಸಲಾದರೆ ಎಫ್ಐಆರ್ ದಾಖಲಿಸಲು ನಿರಾಕರಿಸುವ ಪ್ರಕರಣಗಳು ಕೂಡಾ ಅಷ್ಟೇ ಇವೆ.
ಈ ಸಮೀಕ್ಷೆಯನ್ನು ನಡೆಸಲು ಮುಂದಾದ ಹೆಚ್ಚುವರಿ ಪೊಲೀಸ್ ಪ್ರಧಾನ ನಿರ್ದೇಶಕರಾದ ಬಿಪಿನ್ ಬಿಹಾರಿ ಹೇಳುವಂತೆ ಪ್ರಕರಣವನ್ನು ದಾಖಲಿಸಲು ನಿರಾಕರಿಸುವುದು ಗಂಭೀರ ವಿಷಯವಾಗಿದ್ದು ಅದು ಅಪರಾಧಿ ನ್ಯಾಯ ವ್ಯವಸ್ಥೆಯನ್ನು ಹಾಳುಗೆಡವುದಕ್ಕೆ ಸಮ.
ಬಹುತೇಕ ಪ್ರಕರಣಗಳನ್ನು ಪೊಲೀಸರು ಗಂಭೀರವಲ್ಲದ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಿ ಆ ಮೂಲಕ ಪ್ರಕರಣದಲ್ಲಿ ಯಾವುದೇ ತನಿಖೆಯಾಗದಂತೆ ನೋಡಿಕೊಳ್ಳುತ್ತಾರೆ ಎಂಬುದು ಸಮೀಕ್ಷೆಯಲ್ಲಿ ಬಯಲಾಗಿದೆ.
ವಾರ್ಷಿಕ ಅಪರಾಧಗಳ ಏರಿಕೆ ಅಥವಾ ಇಳಿಕೆಯ ಅಂಕಿಅಂಶಗಳ ಮೂಲಕ ತಮ್ಮ ಇಲಾಖೆಯ ಸಾಮರ್ಥ್ಯವನ್ನು ಅಳೆಯುವಲ್ಲೇ ಸಂತುಷ್ಟರಾಗಿರುವ ಪೊಲೀಸರಿಗೆ ಇದೊಂದು ನಿತ್ಯದ ಕಾಯಕವಾಗಿದೆ. ಅಪರಾಧಗಳಲ್ಲಿ ಏರಿಕೆಯಾದರೆ ಹಿರಿಯ ಅಧಿಕಾರಿಗಳ ಕೋಪಕ್ಕೆ ತುತ್ತಾಗಬೇಕಾಗುತ್ತದೆ ಎಂದು ಹೇಳುತ್ತಾರೆ ಸಹಾಯಕ ಪೊಲೀಸ್ ಆಯುಕ್ತರು.
ಸಮೀಕ್ಷೆಯ ವರದಿಯ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲು ನಿರಾಕರಿಸುವ ಅಥವಾ ಅಪರಾಧವನ್ನು ಕ್ಷುಲ್ಲಕಗೊಳಿಸಲು ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಪ್ರಧಾನ ನಿರ್ದೇಶಕರು ಏಳು ವಲಯಗಳ ಐಜಿಪಿಗಳಿಗೆ ಸೂಚಿಸಿದ್ದಾರೆ. ಈ ಸೂಚನೆಯನ್ನು ನೀಡಿದ ಒಂದು ತಿಂಗಳಲ್ಲೇ ಎಫ್ಐಆರ್ ದಾಖಲಾತಿಯಲ್ಲಿ 8% ಏರಿಕೆಯಾಗಿರುವುದಾಗಿ ಡಿಜಿಪಿ ಬಿಹಾರಿ ತಿಳಿಸುತ್ತಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.