Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಬ್ಯಾಂಕುಗಳಿಗೆ ಇಚ್ಛಾಪೂರ್ವಕ...

ದೇಶದಲ್ಲಿ ಬ್ಯಾಂಕುಗಳಿಗೆ ಇಚ್ಛಾಪೂರ್ವಕ ಸುಸ್ತಿದಾರರಿಂದ 1.1 ಲಕ್ಷ ಕೋಟಿ ರೂ. ಬಾಕಿ!

ವಾರ್ತಾಭಾರತಿವಾರ್ತಾಭಾರತಿ23 Feb 2018 11:18 AM IST
share
ದೇಶದಲ್ಲಿ ಬ್ಯಾಂಕುಗಳಿಗೆ ಇಚ್ಛಾಪೂರ್ವಕ ಸುಸ್ತಿದಾರರಿಂದ 1.1 ಲಕ್ಷ ಕೋಟಿ ರೂ. ಬಾಕಿ!

ಹೊಸದಿಲ್ಲಿ, ಫೆ. 23: ದೇಶದಲ್ಲಿ ಬ್ಯಾಂಕುಗಳಿಗೆ ಇಚ್ಛಾಪೂರ್ವಕ ಸುಸ್ತಿದಾರರಿಂದ ಎಷ್ಟು ಬಾಕಿ ಇದೆ ಎಂಬ ಅಂಕಿ ಅಂಶ ನೋಡಿದರೆ ನೀವು ಹೌಹಾರುತ್ತೀರಿ. 2017ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಿಗೆ ಸುಸ್ತಿ ಬಾಕಿ ಇರುವ 1.1 ಲಕ್ಷ ಕೋಟಿ ರೂಪಾಯಿಗಳನ್ನು ಇಚ್ಛಾಪೂರ್ವಕ ಸುಸ್ತಿ ಎಂದು ಪರಿಗಣಿಸಲಾಗಿದೆ. ಅಂದರೆ ಮರುಪಾವತಿಸುವ ಸಾಮರ್ಥ್ಯ ಇದ್ದೂ, ಪಾವತಿಸದೇ ಸುಸ್ತಿ ಉಳಿಸಿಕೊಂಡಿರುವ ಮೊತ್ತ ಇದಾಗಿದೆ.

ವಿವಿಧ ಬ್ಯಾಂಕ್‌ಗಳು ಸಲ್ಲಿಸಿರುವ ವಸೂಲಾತಿ ದಾವೆಗಳನ್ನು ವಿಶ್ಲೇಷಿಸಿದಾಗ ಸುಮಾರು ಒಂಬತ್ತು ಸಾವಿರ ಇಂಥ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಲ್ಲೂ ಅಗ್ರ 11 ಸಾಲಗಾರ ಕಂಪನಿಗಳು ಒಂದು ಸಾವಿರ ಕೋಟಿಗಿಂತ ಅಧಿಕ ಸುಸ್ತಿಬಾಕಿ ಇರಿಸಿಕೊಂಡಿವೆ. ಈ ಹನ್ನೊಂದು ಕಂಪನಿಗಳು ಬ್ಯಾಂಕ್‌ಗಳಿಗೆ ಪಾವತಿಸಬೇಕಾದ ಒಟ್ಟು ಸುಸ್ತಿ ಮೌಲ್ಯ 26 ಸಾವಿರ ಕೋಟಿ !.

25 ಲಕ್ಷಕ್ಕಿಂತ ಅಧಿಕ ಬಾಕಿಯ ಪ್ರಕರಣಗಳಲ್ಲಿ ವಸೂಲಾತಿ ದಾವೆಯನ್ನು ಹೂಡಲಾಗಿದ್ದು, ಇದರ ಮಾಹಿತಿ ಸಾರ್ವಜನಿಕವಾಗಿ ಲಭ್ಯ. ಇದನ್ನು ವಿಶ್ಲೇಷಿಸಿದಾಗ ಈ ದೊಡ್ಡ ಮೊತ್ತದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜತಿನ್ ಮೆಹ್ತಾ ಪ್ರವರ್ತಕರಾಗಿರುವ ವಿನ್‌ಸಮ್ ಡೈಮಂಡ್ಸ್ ಆ್ಯಂಡ್ ಜ್ಯುವೆಲ್ಲರಿ ಲಿಮಿಟೆಡ್ ಮತ್ತು ಫಾರೆವರ್ ಪ್ರಿಶಿಸಸ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ಸ್ ಲಿಮಿಟೆಡ್ ವಿವಿಧ ಬ್ಯಾಂಕುಗಳಿಗೆ 5000 ಕೋಟಿ ರೂಪಾಯಿ ಸುಸ್ತಿ ಬಾಕಿ ಉಳಿಸಿಕೊಂಡಿವೆ. ಮೆಹ್ತಾ ಇದೀಗ ಸೆಂಟ್ ಕಿಟ್ಸ್ ಆ್ಯಂಡ್ ನೆವಿಸ್‌ನ ಪ್ರಜೆಯಾಗಿದ್ದು, ಇದು ತೆರಿಗೆಗಳ್ಳರ ಸ್ವರ್ಗ ಎನಿಸಿಕೊಂಡ ದೇಶವಾಗಿದೆ. ಈ ದೇಶ ದೊಂದಿಗೆ ಭಾರತ ಗಡೀಪಾರು ಒಪ್ಪಂದವನ್ನು ಕೂಡಾ ಹೊಂದಿಲ್ಲ.

ವಿಜಯ್ ಮಲ್ಯ ಅವರ ಕಿಂಗ್‌ಫಿಶರ್ ಏರ್‌ಲೈನ್ಸ್ ಮೂರು ಸಾವಿರ ಕೋಟಿ, ಸಂದೀಪ್ ಜುಂಜುನ್‌ವಾಲಾ ಮಾಲಕತ್ವದ ಆರ್‌ಇಐ ಆಗ್ರೊ 2730 ಕೋಟಿ, ಪಿ.ಕೆ.ತಿವಾರಿ ಮಾಲಕತ್ವದ ಮಹೂವಾ ಮೀಡಿಯಾ 2416 ಕೋಟಿ ಹಾಗೂ ಝೂಮ್ ಡೆವಲಪರ್ಸ್‌ 2371 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡು, ಅಗ್ರ ಐದು ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X